ಸುಳ್ಯ: ನರೇಂದ್ರ ಮೋದಿ ನೇತೃತ್ವದ ಎರಡನೇ ಎನ್.ಡಿ.ಎ ಸರಕಾರದಲ್ಲಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಡಿ.ವಿ.ಸದಾನಂದ ಗೌಡ ಅಧಿಕಾರ ವಹಿಸಿರುವುದರಿಂದ ಡಿವಿ ಹುಟ್ಟೂರಾದ ಸುಳ್ಯದಲ್ಲಿ ಸಂಭ್ರಮದ ವಾತಾವರಣ ಉಂಟಾಗಿದೆ.
ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಸಂಭ್ರಮ ಆಚರಿಸಿದರು. ಟೀಂ ಮೋದಿ ಸಚಿವ ಸಂಪುಟದಲ್ಲಿ ಎರಡನೇ ಬಾರಿಯೂ ಕ್ಯಾಬಿನೆಟ್ ಸಚಿವ ಪದವಿ ಪಡೆದು ಅಧಿಕಾರ ವಹಿಸಿದ ಸಂದರ್ಭದಲ್ಲಿ ಸದಾನಂದ ಗೌಡರ ತರವಾಡು ಮನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದಲ್ಲಿಯೂ ಸಂಭ್ರಮದ ಅಲೆಯೆಬ್ಬಿಸಿತು. ಪ್ರಥಮ ಮೋದಿ ಸರಕಾರಲ್ಲಿ ಐದು ವರ್ಷಗಳ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಸದಾನಂದ ಗೌಡರು ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ, 2009ರಲ್ಲಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಅವರು 2011ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು. 2014 ಮತ್ತು 2019ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಡಿ.ವಿ.ಎಸ್ ಎರಡನೇ ಬಾರಿ ಕೇಂದ್ರ ಸಚಿವರಾಗಿದ್ದಾರೆ.
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…
ಅಸ್ಸಾಂನಲ್ಲಿ ಐಸಿಎಆರ್–ಐಎಆರ್ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…