Advertisement
ನಮ್ಮೂರ ಸುದ್ದಿ

ಡಿ.ವಿ.ಎಸ್‍ಗೆ ಮತ್ತೆ ಒಲಿದ ಸಚಿವ ಸ್ಥಾನ : ಹುಟ್ಟೂರಲ್ಲಿ ಸಂಭ್ರಮ

Share

ಸುಳ್ಯ:  ನರೇಂದ್ರ ಮೋದಿ ನೇತೃತ್ವದ ಎರಡನೇ ಎನ್.ಡಿ.ಎ ಸರಕಾರದಲ್ಲಿಯೂ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಡಿ.ವಿ.ಸದಾನಂದ ಗೌಡ ಅಧಿಕಾರ ವಹಿಸಿರುವುದರಿಂದ ಡಿವಿ ಹುಟ್ಟೂರಾದ ಸುಳ್ಯದಲ್ಲಿ ಸಂಭ್ರಮದ ವಾತಾವರಣ ಉಂಟಾಗಿದೆ.

ಬಿಜೆಪಿ ಕಾರ್ಯಕರ್ತರು ಮತ್ತು ಅಭಿಮಾನಿಗಳು ಪಟಾಕಿ ಸಿಡಿಸಿ, ಸಿಹಿ ತಿಂಡಿ ವಿತರಿಸಿ ಸಂಭ್ರಮ ಆಚರಿಸಿದರು. ಟೀಂ ಮೋದಿ ಸಚಿವ ಸಂಪುಟದಲ್ಲಿ ಎರಡನೇ ಬಾರಿಯೂ ಕ್ಯಾಬಿನೆಟ್ ಸಚಿವ ಪದವಿ ಪಡೆದು ಅಧಿಕಾರ ವಹಿಸಿದ ಸಂದರ್ಭದಲ್ಲಿ ಸದಾನಂದ ಗೌಡರ ತರವಾಡು ಮನೆ ಸುಳ್ಯ ತಾಲೂಕಿನ ಮಂಡೆಕೋಲು ಗ್ರಾಮದ ದೇವರಗುಂಡದಲ್ಲಿಯೂ ಸಂಭ್ರಮದ ಅಲೆಯೆಬ್ಬಿಸಿತು. ಪ್ರಥಮ ಮೋದಿ ಸರಕಾರಲ್ಲಿ ಐದು ವರ್ಷಗಳ ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದ ಸದಾನಂದ ಗೌಡರು ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು. 2004ರಲ್ಲಿ ಮಂಗಳೂರು ಲೋಕಸಭಾ ಕ್ಷೇತ್ರದಿಂದ, 2009ರಲ್ಲಿ ಉಡುಪಿ-ಚಿಕಮಗಳೂರು ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದ ಅವರು 2011ರಲ್ಲಿ ರಾಜ್ಯದ ಮುಖ್ಯಮಂತ್ರಿಯಾದರು. 2014 ಮತ್ತು 2019ರಲ್ಲಿ ಬೆಂಗಳೂರು ಉತ್ತರ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದಾರೆ. ಲೋಕಸಭೆಗೆ ನಾಲ್ಕನೇ ಬಾರಿ ಆಯ್ಕೆಯಾದ ಡಿ.ವಿ.ಎಸ್ ಎರಡನೇ ಬಾರಿ ಕೇಂದ್ರ ಸಚಿವರಾಗಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 minutes ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

7 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

9 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

18 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

18 hours ago

ಹವಾಮಾನ ವರದಿ | 28-07-2026 | ಕರಾವಳಿ, ಮಲೆನಾಡಿನಲ್ಲಿ ಸಾಮಾನ್ಯ ಮಳೆ ಮುಂದುವರಿಕೆ

ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಬಿಟ್ಟುಬಿಟ್ಟು ಮಳೆ ಮುಂದುವರಿಯುವ…

18 hours ago