ಡಿ.12 : ಸಿರಿಕುರಲ್ ನಗರದಲ್ಲಿ ವನದುರ್ಗಾ ದೈವಸ್ಥಾನ ಪ್ರತಿಷ್ಠಾ ವಾರ್ಷಿಕೋತ್ಸವ

November 29, 2019
9:35 PM

ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಶ್ರೀ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಡಿ.12ರಂದು ಬಿ.ಎಸ್.ಎನ್. ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೊಕುಲ್‌ದಾಸ್ ತಿಳಿಸಿದ್ದಾರೆ.‌

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು  ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯುವುದು.

ಸಂಜೆ ಸಿರಿಕುರಲ್ ಗೆಳೆಯರ ಬಳಗ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯುವುದು ಎಂದು ಹೇಳಿದರು. ದೈವಸ್ಥಾನದ ಆಡಳಿತ ಮಂಡಳಿಯ ಸಂಚಾಲಕ ಅಶೋಕ್ ಪೀಚೆಮನೆ, ಪ್ರಧಾನ ಕಾರ್ಯದರ್ಶಿ ಜನಾರ್ದನ ಚೊಕ್ಕಾಡಿ, ಸುಚಿನ್ ಕಡ್ಯ, ಜಗನ್ನಾಥ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅನ್ನವೇ ಜೀವನ, ಅನ್ನವೇ ಮೃತ್ಯು
August 7, 2026
8:58 PM
by: ದ ರೂರಲ್ ಮಿರರ್.ಕಾಂ
‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ
August 6, 2026
11:04 PM
by: ದ ರೂರಲ್ ಮಿರರ್.ಕಾಂ
ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ
August 5, 2026
8:52 PM
by: ದ ರೂರಲ್ ಮಿರರ್.ಕಾಂ
ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ
August 5, 2026
9:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror