ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಶ್ರೀ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಡಿ.12ರಂದು ಬಿ.ಎಸ್.ಎನ್. ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೊಕುಲ್ದಾಸ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯುವುದು.
ಸಂಜೆ ಸಿರಿಕುರಲ್ ಗೆಳೆಯರ ಬಳಗ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯುವುದು ಎಂದು ಹೇಳಿದರು. ದೈವಸ್ಥಾನದ ಆಡಳಿತ ಮಂಡಳಿಯ ಸಂಚಾಲಕ ಅಶೋಕ್ ಪೀಚೆಮನೆ, ಪ್ರಧಾನ ಕಾರ್ಯದರ್ಶಿ ಜನಾರ್ದನ ಚೊಕ್ಕಾಡಿ, ಸುಚಿನ್ ಕಡ್ಯ, ಜಗನ್ನಾಥ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…
ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ರೈತರೊಬ್ಬರು ಶೂನ್ಯ ಬಂಡವಾಳದಲ್ಲಿ ಅತ್ಯುತ್ತಮ ಇಳುವರಿ ತೆಗೆಯುವ…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮ ಪಂಚಾಯತ್ ಆತ್ಮನಿರ್ಭರ ಯೋಜನೆಯಡಿಯಲ್ಲಿ…
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಕಾವೇರಿ ನದಿ ತೀರದಲ್ಲಿ ಅಸ್ತಿ ವಿಸರ್ಜನೆ ಮಾಡಿ ನದಿ…