ಸುಳ್ಯ: ಆಲೆಟ್ಟಿ ಗ್ರಾಮದ ಕಲ್ಚೆರ್ಪೆ ಸಿರಿಕುರಲ್ ನಗರದಲ್ಲಿ ಒಂದು ವರ್ಷದ ಹಿಂದೆ ನಿರ್ಮಾಣಗೊಂಡಿರುವ ಶ್ರೀ ವನದುರ್ಗಾ ಮತ್ತು ಪರಿವಾರ ದೈವಗಳ ದೈವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ ಡಿ.12ರಂದು ಬಿ.ಎಸ್.ಎನ್. ಕಡಮಣ್ಣಾಯ ತಂತ್ರಿಯವರ ನೇತೃತ್ವದಲ್ಲಿ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮಂಡಳಿ ಅಧ್ಯಕ್ಷ ಗೊಕುಲ್ದಾಸ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಗ್ಗೆಯಿಂದ ವಿವಿಧ ಪೂಜಾ ಕಾರ್ಯಕ್ರಮ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಗುಳಿಗ ದೈವದ ಕೋಲ ನಡೆದು ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯುವುದು.
ಸಂಜೆ ಸಿರಿಕುರಲ್ ಗೆಳೆಯರ ಬಳಗ ಪ್ರಾಯೋಜಕತ್ವದಲ್ಲಿ ಮಂಜು ಸುಳ್ಯ ಇವರ ಸುಗಿಪು ಜಾನಪದ ಕಲಾ ತಂಡದ ಮಕ್ಕಳಿಂದ ಜಾನಪದ ನೃತ್ಯ ನಡೆಯುವುದು ಎಂದು ಹೇಳಿದರು. ದೈವಸ್ಥಾನದ ಆಡಳಿತ ಮಂಡಳಿಯ ಸಂಚಾಲಕ ಅಶೋಕ್ ಪೀಚೆಮನೆ, ಪ್ರಧಾನ ಕಾರ್ಯದರ್ಶಿ ಜನಾರ್ದನ ಚೊಕ್ಕಾಡಿ, ಸುಚಿನ್ ಕಡ್ಯ, ಜಗನ್ನಾಥ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…