ಸುಳ್ಯ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಪ್ರವರ್ತಿತ ಸುಳ್ಯ ತಾಲೂಕು ಭಜನಾ ಪರಿಷತ್ ಆಶ್ರಯದಲ್ಲಿ ಡಿ.15 ರಂದು ನಡೆಯಲಿರುವ ಭಜನೋತ್ಸವದ ಪೂರ್ವಭಾವಿ ಸಭೆಯು ಪಂಜ ಶ್ರೀ ಶಾರದಾಂಬಾ ಭಜನಾ ಮಂದಿರದಲ್ಲಿ ನಡೆಯಿತು.
ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಶಿವಪ್ರಸಾದ್ ಆಲೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯಾಧ್ಯಕ್ಷ ಬಾಲಕೃಷ್ಣ ಪುತ್ಯ, ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸಂತೋಷ್ ಕುಮಾರ್ ರೈ, ಗೌರವಾಧ್ಯಕ್ಷ ವಿಶ್ವನಾಥ ರೈ ಅರ್ಗುಡಿ, ಸುರೇಶ್ ಕಣೆಮರಡ್ಕ, ಮೋನಪ್ಪ ಗೌಡ ಬೊಳ್ಳಾಜೆ, ವಿಶ್ವನಾಥ ಸಂಪ,ಮೇಲ್ವಿಚಾರಕ ವಸಂತ್ ಉಪಸ್ಥಿತರಿದ್ದರು.
ಡಿ.15 ರಂದು ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ತಾಲೂಕಿನ ಎಲ್ಲಾ ಭಜನಾ ಮಂಡಳಿಗಳನ್ನು ಒಟ್ಟು ಸೇರಿಸಿ ಒಂದು ದಿನದ ಕಾರ್ಯಕ್ರಮ ನಡೆಸುವುದಾಗಿ ತೀರ್ಮಾನಿಸಲಾಯಿತು. ಭಜನಾ ತರಬೇತಿ ಮತ್ತು ಕುಣಿತ ಭಜನೆಯ ತರಬೇತಿಯನ್ನು ಸಂಪನ್ಮೂಲ ವ್ಯಕ್ತಿಗಳಿಂದ ನೀಡುವ ಬಗ್ಗೆ ತೀರ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಭಜನೋತ್ಸವ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಅಧ್ಯಕ್ಷರಾಗಿ ವಿಶ್ವನಾಥ ಸಂಪ, ಕಾರ್ಯದರ್ಶಿ ವಸಂತ್, ಉಪಾಧ್ಯಕ್ಷ ರಾಗಿ ಶಿವಾನಂದ ಕಿಣಿ ಸುಬ್ರಹ್ಮಣ್ಯ, ವಸಂತ್ ಹುದೇರಿ, ಕೋಶಾಧಿಕಾರಿ ರಾಜೇಶ್ ಕುದ್ವ, ಜತೆ ಕಾರ್ಯದರ್ಶಿ ಮೋನಪ್ಪ ಗೌಡ ಬೊಳ್ಳಾಜೆ ಇವರುಗಳನ್ನು ಅಧ್ಯಕ್ಷರ ಸಲಹೆಯಂತೆ ಆಯ್ಕೆ ಮಾಡಲಾಯಿತು.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…