ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು. ಊರಿನ ಹಿರಿಯರಾದ ಗೆಜ್ಜೆ ತಿಮ್ಮಪ್ಪ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಬಳಿಕ ಬೈಲುವಾರು ಸಭೆ ನಡೆಯಿತು. ಸಭೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನ , ಚಪ್ಪರ ಮುಹೂರ್ತ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಆರ್ಥಿಕ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಕುಳ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ.24 ರಂದು ಚಪ್ಪರ ಮುಹೂರ್ತ ನಡೆಯಲಿದೆ. ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…