ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು. ಊರಿನ ಹಿರಿಯರಾದ ಗೆಜ್ಜೆ ತಿಮ್ಮಪ್ಪ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಬಳಿಕ ಬೈಲುವಾರು ಸಭೆ ನಡೆಯಿತು. ಸಭೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನ , ಚಪ್ಪರ ಮುಹೂರ್ತ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಆರ್ಥಿಕ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಕುಳ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ.24 ರಂದು ಚಪ್ಪರ ಮುಹೂರ್ತ ನಡೆಯಲಿದೆ. ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…
ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…
ಶಿರಾಡಿ ಘಾಟ್ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…
ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…
ಕರಾವಳಿ ಕರ್ನಾಟಕ, ದಕ್ಷಿಣ ಒಳನಾಡು ಕರ್ನಾಟಕ ಹಾಗೂ ಕೇರಳದಲ್ಲಿ ಇಂದು ಭಾರೀ ಮಳೆಯ…