ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಆಮಂತ್ರಣ ಪತ್ರಿಕೆ ಬಿಡುಗಡೆಯು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ನಡೆಯಿತು. ಊರಿನ ಹಿರಿಯರಾದ ಗೆಜ್ಜೆ ತಿಮ್ಮಪ್ಪ ಗೌಡ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದರು.
ಬಳಿಕ ಬೈಲುವಾರು ಸಭೆ ನಡೆಯಿತು. ಸಭೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನ , ಚಪ್ಪರ ಮುಹೂರ್ತ ಸೇರಿದಂತೆ ಇತರ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಆರ್ಥಿಕ ಸಮಿತಿ ಸಂಚಾಲಕ ಸುಬ್ರಹ್ಮಣ್ಯ ಕುಳ, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ.24 ರಂದು ಚಪ್ಪರ ಮುಹೂರ್ತ ನಡೆಯಲಿದೆ. ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…