ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಭಾನುವಾರ ಚಪ್ಪರ ಮುಹೂರ್ತ ನಡೆಯಿತು. ಊರಿನ ಹಿರಿಯರಾದ ಶೀನಪ್ಪ ಗೌಡ ಎರುಂಬಿಲ ಚಪ್ಪರ ಮುಹೂರ್ತ ನೆರವೇರಿಸಿದರು. ಬಳಿಕ ಧಾರ್ಮಿಕ ಉತ್ಸವ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಜಾತ್ರಾ ಉತ್ಸವದ ಸಿದ್ಧತೆಗಳು ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನದ ಬಗ್ಗೆ ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಕೋಶಾಧಿಕಾರಿ ಮುರಳಿ ಕಾಮತ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ ರೈ ಅರ್ಗುಡಿ ಸೇರಿದಂತೆ ವಿವಿಧ ಸಮಿತಿ ಸಂಚಾಲಕರುಗಳು, ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನ.26 ರಂದು ಮಂಗಳವಾರ ರಾತ್ರಿ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ಇದೇ ವೇಳೆ ಭಕ್ತಾದಿಗಳಿಗೆ ಮಾಹಿತಿ ನೀಡಲಾಯಿತು.
ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…