Advertisement
ಸುದ್ದಿಗಳು

ಡಿ.19 ರಿಂದ ಬಳ್ಪ ಶ್ರೀ ತ್ರಿಶೂಲಿನೀ ದೇವಸ್ಥಾನದಲ್ಲಿ ಜಾತ್ರೆ : ಚಪ್ಪರ ಮುಹೂರ್ತ

Share

ಬಳ್ಪ: ಇತಿಹಾಸ ಪ್ರಸಿದ್ಧ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ‌ ಜಾತ್ರೋತ್ಸವ ಡಿ. 19 ರಿಂದ ಡಿ. 23 ರ ತನಕ ನಡೆಯಲಿದೆ. ಈ ಪ್ರಯುಕ್ತ ಭಾನುವಾರ ಚಪ್ಪರ ಮುಹೂರ್ತ ನಡೆಯಿತು. ಊರಿನ ಹಿರಿಯರಾದ  ಶೀನಪ್ಪ ಗೌಡ ಎರುಂಬಿಲ ಚಪ್ಪರ ಮುಹೂರ್ತ ನೆರವೇರಿಸಿದರು. ಬಳಿಕ ಧಾರ್ಮಿಕ ಉತ್ಸವ ಸಮಿತಿ ಪದಾಧಿಕಾರಿಗಳ ಸಭೆ ನಡೆಯಿತು. ಜಾತ್ರಾ ಉತ್ಸವದ ಸಿದ್ಧತೆಗಳು ಹಾಗೂ ಆಮಂತ್ರಣ ಪತ್ರಿಕೆ ವಿತರಣಾ ಅಭಿಯಾನದ ಬಗ್ಗೆ ಚರ್ಚೆ ನಡೆಸಲಾಯಿತು.

 

 

ಸಭೆಯಲ್ಲಿ ದೇವಳದ ಆಡಳಿತ ಮೊಕ್ತೇಸರ ಎಂ.ವಿ. ಶ್ರೀವತ್ಸ, ಧಾರ್ಮಿಕ ಉತ್ಸವ ಸಮಿತಿ ಅಧ್ಯಕ್ಷ ಅರ್ಗುಡಿ ಸದಾನಂದ ರೈ , ಕೋಶಾಧಿಕಾರಿ ಮುರಳಿ ಕಾಮತ್, ಸಂಘಟನಾ ಕಾರ್ಯದರ್ಶಿ ವಿಶ್ವನಾಥ ರೈ ಅರ್ಗುಡಿ ಸೇರಿದಂತೆ ವಿವಿಧ ಸಮಿತಿ ಸಂಚಾಲಕರುಗಳು,  ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

 

ನ.26 ರಂದು ಮಂಗಳವಾರ ರಾತ್ರಿ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ  ಕಾರ್ತಿಕ ದೀಪೋತ್ಸವ ನಡೆಯಲಿದೆ ಎಂದು ಇದೇ ವೇಳೆ ಭಕ್ತಾದಿಗಳಿಗೆ ಮಾಹಿತಿ ನೀಡಲಾಯಿತು.

 

 ಡಿ.12 ರಂದು ಗೊನೆ ಮುಹೂರ್ತ , ಡಿ.18 ರಂದು ಹಸಿರುಹೊರೆಕಾಣಿಕೆ ಸಂಗ್ರಹ ಡಿ.19 ರಂದು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ ಬಲಿ, ಉತ್ಸವ , ಹಾಗೂ ಸಂಜೆ ದೈವಗಳ ನೇಮ ಡಿ.20 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಧಾರ್ಮಿಕ ಕಾರ್ಯಕ್ರಮ ಆರಂಭಗೊಂಡು ಡಿ. 22 ರಂದು ಬ್ರಹ್ಮ ರಥೋತ್ಸವ ನಡೆಯಲಿದೆ. ಡಿ.23 ರಂದು ದರ್ಶನಬಲಿ ನಡೆದು ಸಂಜೆ ಅವಭೃತೋತ್ಸವ ನಡೆಯಲಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

16 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago