ಸವಣೂರು : ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತ)ಕ್ಕೆ ಪೂಜೆ ಸಲ್ಲಿಸುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಲಿದೆ.
ಡಿ.1ರ ರಾತ್ರಿ 7 ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯಲಿದೆ. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ವಿಶೇಷತೆ: ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…
ಕೊಡಗು ಜಿಲ್ಲೆಯಲ್ಲಿ ಮಳೆ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೆಚ್ಚಿನ ಗಾಳಿ-ಮಳೆ…