ಸವಣೂರು : ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತ)ಕ್ಕೆ ಪೂಜೆ ಸಲ್ಲಿಸುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಲಿದೆ.
ಡಿ.1ರ ರಾತ್ರಿ 7 ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯಲಿದೆ. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ವಿಶೇಷತೆ: ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…
ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…