ಸವಣೂರು : ಪುತ್ತೂರು ತಾಲೂಕಿನಲ್ಲಿ ವಲ್ಮೀಕ (ಹುತ್ತ)ಕ್ಕೆ ಪೂಜೆ ಸಲ್ಲಿಸುವ ವಿಶೇಷ ಹಾಗೂ ಕಾರಣಿಕ ಸಾನಿಧ್ಯ ಕೊಳ್ತಿಗೆ ನಳೀಲು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವ ವಿವಿಧ ಧಾರ್ಮಿಕ ಕಾರ್ಯಗಳೊಂದಿಗೆ ಡಿ.1 ಮತ್ತು ಡಿ.2 ರಂದು ನಡೆಯಲಿದೆ.
ಡಿ.1ರ ರಾತ್ರಿ 7 ಕ್ಕೆ ವಿಶೇಷ ಕಾರ್ತಿಕ ಪೂಜೆ ನಡೆಯಲಿದೆ. ಡಿ.2ರಂದು ಬೆಳಿಗ್ಗೆ ಗಣಪತಿ ಹೋಮ, ನಾಗತಂಬಿಲ, ಸಾಮೂಹಿಕ ಆಶ್ಲೇಷ ಬಲಿ ಸೇವೆ , ಮದ್ಯಾಹ್ನ ಚಂಪಾಷಷ್ಠಿ ಮಹೋತ್ಸವ, ಹೂವಿನ ಪೂಜೆ, ವಿಶೇಷ ಪೂಜೆ, ಪರಿವಾರ ದೈವಗಳಿಗೆ ತಂಬಿಲ ಸೇವೆ ನಡೆದು ಪ್ರಸಾದ ವಿತರಣೆ ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದೆ.
ವಿಶೇಷತೆ: ನಳೀಲು ಶ್ರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಹುತ್ತಕ್ಕೆ ಆರಾಧನೆ ನಡೆಯುತ್ತದೆ. ಇದು ಭಕ್ತರ ಪಾಲಿನ ಶ್ರದ್ದೆಯ ಹಾಗೂ ಭಕ್ತಿಯ ಕ್ಷೇತ್ರವಾಗಿದೆ. ಪುತ್ತೂರು ತಾಲೂಕಿನಲ್ಲಿ ಹುತ್ತಕ್ಕೆ ಸೇವೆ ಪಡೆಯುವ ಏಕೈಕ ಕ್ಷೇತ್ರವಾಗಿರುವ ಇಲ್ಲಿ ಕಂಕಣ ಭಾಗ್ಯಕ್ಕಾಗಿ, ಸಂತಾನ ಭಾಗ್ಯಕ್ಕೆ, ಉದ್ಯೋಗ, ಇಷ್ಟಾರ್ಥ ಸಿದ್ದಿಗೆ, ವಿದ್ಯೆಗಾಗಿ ಪೂಜೆ ಸಲ್ಲಿಸಿದರೆ ಫಲ ಪ್ರಾಪ್ತಿ ಆಗುತ್ತದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಇಲ್ಲಿ ಹುತ್ತದ ರೂಪದಲ್ಲಿರುವ ಸುಬ್ರಹ್ಮಣ್ಯನಿಗೆ ರಂಗಪೂಜೆ, ಹೂವಿನ ಪೂಜೆ, ರಾಹು ಜಪ, ಆಶ್ಲೇಷ ಬಲಿ, ಕುಂಕುಮಾರ್ಚನೆ, ಕಾರ್ತಿಕ ಪೂಜೆ, ನಾಗನ ಕಟ್ಟೆಯಲ್ಲಿ ನಾಗತಂಬಿಲ ಹಾಗೂ ಇತರ ಸೇವೆಗಳಾದ ಆಶ್ಲೇಷ ಬಲಿ, ಸರ್ಪ ಸಂಸ್ಕಾರ, ನವಗ್ರಹ ಶಾಂತಿ ಹೋಮ ನಡೆಯುತ್ತದೆ. ಭಕ್ತಾದಿಗಳು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ದೇವಸ್ಥಾನದ ಆಡಳಿತ ಮೊಕ್ತೇಸರ ಸಂತೋಷ್ ಕುಮಾರ್ ರೈ ನಳೀಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…