Advertisement
ಸುದ್ದಿಗಳು

ಡಿ.22 ರಂದು ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ

Share

ಸುಳ್ಯ: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಹಯೋಗದಲ್ಲಿ ಪತ್ರಕರ್ತರ ಗ್ರಾಮ ವಾಸ್ತವ್ಯ ಸುಳ್ಯ ತಾಲೂಕಿನ ಮಡಪ್ಪಾಡಿಯಲ್ಲಿ ಡಿಸೆಂಬರ್ 22 ರಂದು ನಡೆಯಲಿದೆ. ಈ ಕುರಿತು ಚರ್ಚಿಸಲು ಸುಳ್ಯದ ಎಪಿಎಂಸಿ ಸಭಾಂಗಣದಲ್ಲಿ ಮಂಗಳವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಈ ಕುರಿತು ನಿರ್ಧರಿಸಲಾಯಿತು.

ಗ್ರಾಮ ವಾಸ್ತವ್ಯದ ಸಿದ್ಧತೆಗಳ ಬಗ್ಗೆ ಚರ್ಚಿಸಲು ಡಿ.7 ರಂದು ಅಪರಾಹ್ನ 2.30ಕ್ಕೆ ಮಡಪ್ಪಾಡಿಯಲ್ಲಿ ಸಭೆ ನಡೆಸಲು ನಿರ್ಧರಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕ ಎಸ್‌.ಅಂಗಾರ ಗ್ರಾಮ ವಾಸ್ತವ್ಯದ ಯಶಸ್ವಿಗೆ ಎಲ್ಲಾ ರೀತಿಯ ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು. ಗ್ರಾಮ ವಾಸ್ತವ್ಯದ ಸಂದರ್ಭದಲ್ಲಿ ಜನರು ಮುಂದಿರಿಸುವ ಎಲ್ಲಾ ಸಮಸ್ಯೆಗಳ ಪರಿಹಾರಕ್ಕೆ ಇಲಾಖೆಗಳು ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು. ಅದಕ್ಕಾಗಿ ಏನು ಬೇಕಾಗಿದೆಯೋ ಅದನ್ನು ಜೋಡಿಸಿಕೊಳ್ಳಬೇಕು ಎಂದು ಅವರು ತಹಶೀಲ್ದಾರ್ ಮತ್ತು ತಾ.ಪಂ.ಕಾರ್ಯನಿರ್ವಹಣಾಧಿಕಾರಿಗಳಿಗೆ ಸೂಚಿಸಿದರು. ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಮಾತನಾಡಿ ‘ ಪತ್ರಕರ್ತರ ಸಂಘದ ವತಿಯಿಂದ ಹಮ್ಮಿಕೊಂಡಿರುವ ಈ ವಿನೂತನ ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಸಹಕಾರ ನೀಡಲಾಗುವುದು ಎಂದು ಹೇಳಿದರು.

ಸುಳ್ಯ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ಮಡಪ್ಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶಕುಂತಳಾ ಕೇವಳ, ಉಪಾಧ್ಯಕ್ಷ ಎನ್.ಟಿ.ಹೊನ್ನಪ್ಪ, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎನ್.ಭವಾನಿಶಂಕರ, ಪೊಲೀಸ್ ವೃತ್ತ ನಿರೀಕ್ಷಕ ನವೀನ್ ಚಂದ್ರ ಜೋಗಿ, ಸುಳ್ಯ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮುರಳೀಧರ ಅಡ್ಡನಪಾರೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರಮುಖರಾದ ಪಿ.ಸಿ.ಜಯರಾಮ, ಭರತ್ ಮುಂಡೋಡಿ, ದಿನೇಶ್ ಮಡಪ್ಪಾಡಿ, ಎಂ.ಡಿ.ವಿಜಯಕುಮಾರ್, ಜಯರಾಮ ಹಾಡಿಕಲ್ಲು, ಮಿತ್ರದೇವ ಮಡಪ್ಪಾಡಿ, ವಿನಯಕುಮಾರ್ ಮುಳುಗಾಡು, ಸೋಮಶೇಖರ ಕೇವಳ, ಶಶಿಧರ ಕೇವಳ, ಗಂಗಯ್ಯ ಪೂಂಬಾಡಿ ಮತ್ತಿತರರು ಮಾತನಾಡಿ ಸಲಹೆ ಸೂಚನೆಗಳನ್ನು ನೀಡಿದರು.

ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಎಸ್.ಎನ್.ಮನ್ಮಥ, ಆಶಾ ತಿಮ್ಮಪ್ಪ, ಪುಷ್ಪಾವತಿ ಬಾಳಿಲ, ತಾ.ಪಂ.ಉಪಾಧ್ಯಕ್ಷೆ ಶುಭದಾ ಎಸ್.ರೈ, ನ.ಪಂ.ಸದಸ್ಯರಾದ ಎಂ.ವೆಂಕಪ್ಪ ಗೌಡ, ವಿನಯಕುಮಾರ್ ಕಂದಡ್ಕ, ಕೆ.ಎಸ್.ಉಮ್ಮರ್,  ಪ್ರಮುಖರಾದ ಎಂ.ಬಿ‌.ಸದಾಶಿವ, ಡಾ.ಯು.ಪಿ.ಶಿವಾನಂದ, ಪಿ.ಬಿ.ಸುಧಾಕರ ರೈ, ಅಬ್ದುಲ್ ಕಲಾಂ, ಸುರೇಶ್ ಕಣೆಮರಡ್ಕ, ಶಂಕರ್ ಪೆರಾಜೆ, ಕೆ.ಎಲ್.ಪ್ರದೀಪ್ ಕುಮಾರ್, ತಿಮ್ಮಪ್ಪ ಗೌಡ ಕುಂಡಡ್ಕ, ಡಾ.ಪುರುಷೋತ್ತಮ ಕೆ.ಜಿ, ದೇವರಾಜ್ ಕುದ್ಪಾಜೆ, ಸುಳ್ಯ ಆರಕ್ಷಕ ಉಪನಿರೀಕ್ಷಕ ಎಂ.ಆರ್.ಹರೀಶ್, ವಲಯ ಅರಣ್ಯಾಧಿಕಾರಿ ಎನ್.ಮಂಜುನಾಥ್, ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಸಣ್ಣೇ ಗೌಡ, ಮಡಪ್ಪಾಡಿ ಗ್ರಾಪಂ.ಅಭಿವೃದ್ಧಿ ಅಧಿಕಾರಿ ಧನಪತಿ, ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ದೇವರಾಜ್ ಮುತ್ಲಾಜೆ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಲಕ್ಷ್ಮೀಶ ರೈ, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ, ಗ್ರಾಮಾಂತರ ಕಾರ್ಯದರ್ಶಿ ಸಿದ್ದಿಕ್ ನೀರಾಜೆ, ಕಾರ್ಯಕಾರಿ ಸಮಿತಿ ಸದಸ್ಯರಾದ ಆರ್.ಸಿ.ಭಟ್, ಪುಷ್ಪರಾಜ್.ಬಿ‌.ಎನ್, ಭಾಸ್ಕರ ರೈ ಕಟ್ಟ, ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಗಿರೀಶ್ ಅಡ್ಪಂಗಾಯ, ಪತ್ರಕರ್ತರಾದ ಗಂಗಾಧರ ಮಟ್ಟಿ, ಹರೀಶ್ ಬಂಟ್ವಾಳ್, ಶಿವಪ್ರಸಾದ್ ಕೇರ್ಪಳ, ತೇಜೇಶ್ವರ ಕುಂದಲ್ಪಾಡಿ, ಕಿರಣ್ ಪ್ರಸಾದ್ ಕುಂಡಡ್ಕ, ದಯಾನಂದ ಕೊರತ್ತೋಡಿ, ಪದ್ಮನಾಭ ಮುಂಡೋಕಜೆ, ಶರೀಪ್ ಜಟ್ಟಿಪಳ್ಳ, ಹಸೈನಾರ್ ಜಯನಗರ, ದಿನೇಶ್ ಮಠ, ರಮೇಶ್ ನೀರಬಿದಿರೆ, ಕೆ.ಟಿ.ಭಾಗೀಶ್ ಭಾಗವಹಿಸಿದ್ದರು.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಗಂಗಾಧರ ಕಲ್ಲಪಳ್ಳಿ ಸ್ವಾಗತಿಸಿ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ದುರ್ಗಾಕುಮಾರ್ ನಾಯರ್ ಕೆರೆ ವಂದಿಸಿದರು. ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಲೋಕೇಶ್ ಪೆರ್ಲಂಪಾಡಿ ನಿರೂಪಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

59 minutes ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

3 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

5 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

6 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

18 hours ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

21 hours ago