ಸುಳ್ಯ: ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಡಿಸೆಂಬರ್ 23 ಸೋಮವಾರ ಪೂರ್ವಾಹ್ನ ಗಂಟೆ 10 ರಿಂದ ಡಾ. ಕುರುಂಜಿ ವೆಂಕಟರಮಣ ಗೌಡರಿಂದ ಸುಳ್ಯ ಅಭಿವೃದ್ಧಿಯ ಕೊಡುಗೆ ಎನ್ನುವ ವಿಷಯದಲ್ಲಿ ವಿಚಾರ ಸಂಕಿರಣ ಹಾಗೂ ವಿನಿಮಯಗಳು ಹಮ್ಮಿಕೊಳ್ಳಲಾಗಿದ್ದು ಸಾಹಿತಿ ಹಾಗೂ ನಿವೃತ್ತ ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ಡಾ| ಪ್ರಭಾಕರ ಶಿಶಿಲರವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಇದರೊಂದಿಗೆ ಅರ್ಕಿಟೆಕ್ ಇಂಜಿನಿಯರ್ ಸಾಯಿರಾಂರವರು ನೀರಿಂಗಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕಿನ ಯುವಕ- ಯುವತಿ ಮಂಡಲಗಳು ಹಾಗೂ ಇತರ ಹವ್ಯಾಸಿ ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಬೇಕೆಂದು, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶಂಕರ್ ಪೆರಾಜೆ ಹಾಗೂ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಜಂಟಿಯಾಗಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿರುತ್ತಾರೆ.
ಅಡಿಕೆಯ ಆರೋಗ್ಯ ಪರಿಣಾಮ ಹಾಗೂ ಸುರಕ್ಷತೆ ಕುರಿತು ರಾಷ್ಟ್ರೀಯ ಮಟ್ಟದ ಸಂಸ್ಥೆಗಳೊಂದಿಗೆ ಸಂಯುಕ್ತ…
ಮುಳ್ಳಯ್ಯನಗಿರಿ ಮತ್ತು ಸೀತಾಳಯ್ಯಗಿರಿ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ ನಡೆಸಿ ಪ್ರವಾಸಿಗರಿಗೆ ಜಾಗೃತಿ ಮೂಡಿಸಲಾಯಿತು.…
ಯುಗಾದಿ ಹಿನ್ನೆಲೆ ಕೋಲಾರ ಜಿಲ್ಲೆಯಲ್ಲಿ ಹಾಲಿನ ದರ ಲೀಟರ್ಗೆ ₹2 ಹೆಚ್ಚಳ ಮಾಡಲಾಗಿದೆ.…
ಅಡಿಕೆ ಎಲೆಚುಕ್ಕಿ ರೋಗಕ್ಕೆ 100% ಪರಿಣಾಮಕಾರಿ ಎಂದು ಹೇಳಲಾಗುತ್ತಿರುವ ಬಯೋ ಔಷಧಿಗಳಿಗೆ ICAR…
ರಾಜ್ಯದ ಹಲವೆಡೆ ಗುಡುಗು-ಸಹಿತ ಮಳೆಯ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ…
ಭೂಮಿಯಲ್ಲೇ ಅತಿಹೆಚ್ಚು ಮಳೆಯಾಗುವ ಮೇಘಾಲಯ ಈಗ ನೀರಿನ ಕೊರತೆಯ ಆತಂಕ ಎದುರಿಸುತ್ತಿದೆ. ಹವಾಮಾನ…