ಸುಳ್ಯ: ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಡಿಸೆಂಬರ್ 23 ಸೋಮವಾರ ಪೂರ್ವಾಹ್ನ ಗಂಟೆ 10 ರಿಂದ ಡಾ. ಕುರುಂಜಿ ವೆಂಕಟರಮಣ ಗೌಡರಿಂದ ಸುಳ್ಯ ಅಭಿವೃದ್ಧಿಯ ಕೊಡುಗೆ ಎನ್ನುವ ವಿಷಯದಲ್ಲಿ ವಿಚಾರ ಸಂಕಿರಣ ಹಾಗೂ ವಿನಿಮಯಗಳು ಹಮ್ಮಿಕೊಳ್ಳಲಾಗಿದ್ದು ಸಾಹಿತಿ ಹಾಗೂ ನಿವೃತ್ತ ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ಡಾ| ಪ್ರಭಾಕರ ಶಿಶಿಲರವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಇದರೊಂದಿಗೆ ಅರ್ಕಿಟೆಕ್ ಇಂಜಿನಿಯರ್ ಸಾಯಿರಾಂರವರು ನೀರಿಂಗಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕಿನ ಯುವಕ- ಯುವತಿ ಮಂಡಲಗಳು ಹಾಗೂ ಇತರ ಹವ್ಯಾಸಿ ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಬೇಕೆಂದು, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶಂಕರ್ ಪೆರಾಜೆ ಹಾಗೂ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಜಂಟಿಯಾಗಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿರುತ್ತಾರೆ.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…