ಸುಳ್ಯ: ಯುವಜನ ಸಂಯುಕ್ತ ಮಂಡಳಿ ಸುಳ್ಯ ತಾಲೂಕು ಇದರ ನೇತೃತ್ವದಲ್ಲಿ ಡಾ| ಕುರುಂಜಿ ವೆಂಕಟರಮಣ ಗೌಡರವರ 91ನೇ ಜಯಂತೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ ಹಾಗೂ ರೋಟರಿ ಕ್ಲಬ್ ಸುಳ್ಯ ಇದರ ಸಹಯೋಗದಲ್ಲಿ ಡಿಸೆಂಬರ್ 23 ಸೋಮವಾರ ಪೂರ್ವಾಹ್ನ ಗಂಟೆ 10 ರಿಂದ ಡಾ. ಕುರುಂಜಿ ವೆಂಕಟರಮಣ ಗೌಡರಿಂದ ಸುಳ್ಯ ಅಭಿವೃದ್ಧಿಯ ಕೊಡುಗೆ ಎನ್ನುವ ವಿಷಯದಲ್ಲಿ ವಿಚಾರ ಸಂಕಿರಣ ಹಾಗೂ ವಿನಿಮಯಗಳು ಹಮ್ಮಿಕೊಳ್ಳಲಾಗಿದ್ದು ಸಾಹಿತಿ ಹಾಗೂ ನಿವೃತ್ತ ಅರ್ಥಶಾಸ್ತ್ರದ ಪ್ರಾಧ್ಯಾಪಕರಾದ ಡಾ| ಪ್ರಭಾಕರ ಶಿಶಿಲರವರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ.
ಇದರೊಂದಿಗೆ ಅರ್ಕಿಟೆಕ್ ಇಂಜಿನಿಯರ್ ಸಾಯಿರಾಂರವರು ನೀರಿಂಗಿಸುವ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ತಾಲೂಕಿನ ಯುವಕ- ಯುವತಿ ಮಂಡಲಗಳು ಹಾಗೂ ಇತರ ಹವ್ಯಾಸಿ ಸಂಸ್ಥೆಗಳ ಸದಸ್ಯರುಗಳು ಭಾಗವಹಿಸಬೇಕೆಂದು, ಯುವಜನ ಸಂಯುಕ್ತ ಮಂಡಳಿಯ ಅಧ್ಯಕ್ಷರಾದ ಶಂಕರ್ ಪೆರಾಜೆ ಹಾಗೂ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ಶೈಲೇಶ್ ಅಂಬೆಕಲ್ಲುರವರು ಜಂಟಿಯಾಗಿ ಪತ್ರಿಕಾ ಹೇಳಿಕೆಯಲ್ಲಿ ವಿನಂತಿಸಿಕೊಂಡಿರುತ್ತಾರೆ.
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…
ಕರ್ನಾಟಕ ಮತ್ತು ಮಹಾರಾಷ್ಟ್ರದ ರೈತರಿಗೆ ₹4,800 ಕೋಟಿಗೂ ಅಧಿಕ ಮೊತ್ತದ ಕನಿಷ್ಠ ಬೆಂಬಲ…
ವನ್ಯಜೀವಿಗಳ ಸಂಖ್ಯೆ ಹೆಚ್ಚಳದಿಂದ ಮಾನವ-ಆನೆ ಸಂಘರ್ಷ ತೀವ್ರವಾಗುತ್ತಿರುವ ಹಿನ್ನೆಲೆಯಲ್ಲಿ ಆಯ್ದ ಪ್ರದೇಶಗಳಲ್ಲಿ ಸಂತಾನ…