Advertisement
ಕಾರ್ಯಕ್ರಮಗಳು

ಡಿ.24 ರಿಂದ 26 ಕೆ.ವಿ.ಜಿ ಸುಳ್ಯ ಹಬ್ಬ ಆಚರಣೆ

Share

ಸುಳ್ಯ: ಸುಳ್ಯದ ಅಮರಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 91ನೇ ಜನ್ಮ ದಿನಾಚರಣೆಯ ಅಂಗವಾಗಿ ಕೆ.ವಿ.ಜಿ. ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಡಿ.24ರಿಂದ 26ರವರೆಗೆ ಕೆವಿಜಿ ಸುಳ್ಯ ಹಬ್ಬ ನಡೆಯಲಿದೆ ಎಂದು ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಡಿ.24ರಂದು ಸಂಜೆ 7.00ರಿಂದ ಸುಳ್ಯ ತಾಲೂಕು ಲಗೋರಿ ಅಸೋಸಿಯೇಶನ್ ಇವರ ನೇತೃತ್ವದಲ್ಲಿ ರಾಜ್ಯ ಮಟ್ಟದ ಹೊನಲು ಬೆಳಕಿನ ಆಹ್ವಾನಿತ ಲೀಗ್ ಮಾದರಿಯ ಲಗೋರಿ ಪಂದ್ಯಾಟ, ಶ್ರೀ ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ಹಾಕಿರುವ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ.
ಡಿ.25 ರಂದು ಪೂರ್ವಾಹ್ನ ಗಂಟೆ 9.30ಕ್ಕೆ ತಾಲೂಕು ಮಟ್ಟದ ಕ್ರೀಡಾ ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ನಡೆಯಲಿದೆ. ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೊಸಿಯೇಶನ್ ವತಿಯಿಂದ ಸುಳ್ಯ ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಲಿದೆ. ಮಹಿಳೆಯರಿಗೆ ತ್ರೋಬಾಲ್ ಪಂದ್ಯಾಟವನ್ನು ಏರ್ಪಡಿಸಲಾಗಿದೆ. ಸಂಜೆ 7ಕ್ಕೆ ಸಭಾ ಕಾರ್ಯಕ್ರಮ ನಡೆಯಲಿದ್ದು ಪುತ್ತೂರು ಶಾಸಕ ಸಂಜೀವ ಮಠಂದೂರು ಸಾಧಕರನ್ನು ಸನ್ಮಾನಿಸುವರು.

ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಕರ್ನಾಟಕ ರಾಜ್ಯ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀನಾರಾಯಣ ಕಜೆಗದ್ದೆ ಮುಖ್ಯ ಅತಿಥಿಗಳಾಗಿರುತ್ತಾರೆ. ಸಂಘದ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು ಅಧ್ಯಕ್ಷತೆ ವಹಿಸಲಿದ್ದಾರೆ. ವಿವಿಧ ಕ್ಷೇತ್ರಗಳ ಸಾಧಕರಾದ ಪದ್ಮಾರಂಗನಾಥ, ಡಾ.ಮಾಧವ ಪೆರಾಜೆ, ಡಾ.ರಂಗನಾಥ್, ಕೆ.ರಾಮಚಂದ್ರ ಭಟ್, ಸಿಂಚನಾ ಡಿ. ಗೌಡ ಅವರನ್ನು ಸನ್ಮಾನಿಸಲಾಗುವುದು. ಡಾ.ಕುರುಂಜಿ ವೆಂಕಟ್ರಮಣ ಗೌಡರ ಜನ್ಮ ದಿನವಾದ ಡಿ.26 ರಂದು ಸಂಜೆ 7.00 ಗಂಟೆಗೆ ಕೆ.ವಿ.ಜಿ. ಸಂಸ್ಮರಣೆ ಮತ್ತು ಕೆ.ವಿ.ಜಿ. ಸಾಧನಾಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ. ಕೆ.ವಿ.ಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ. ಕೆ.ವಿ. ಚಿದಾನಂದ ಅಧ್ಯಕ್ಷತೆ ವಹಿಸುವರು. ವಿಲಿಯಂ ಲಸ್ರಾದೋ ಹಾಗೂ ರಾಘವ ಗೌಡ ಪಲ್ಲತ್ತಡ್ಕ ಅವರಿಗೆ ಕೆ.ವಿ.ಜಿ. ಸಾಧನಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಉಪಮುಖ್ಯ ಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಪ್ರಶಸ್ತಿ ಪ್ರಧಾನ ಮಾಡುವರು. ಸುಳ್ಯ ಶಾಸಕ ಎಸ್.ಅಂಗಾರ ಅತಿಥಿಗಳಾಗುವರು. ಉಪನ್ಯಾಸಕ ಡಾ.ಪೂವಪ್ಪ ಕಣಿಯೂರು ಕೆ.ವಿ.ಜಿ. ಸಂಸ್ಮರಣಾ ಭಾಷಣ ಮಾಡಲಿದ್ದಾರೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ ಎಂದು ಅವರು ಹೇಳಿದರು.

ಕೆ.ವಿ.ಜಿ ಸುಳ್ಯ ಹಬ್ಬದ ಅಂಗವಾಗಿ ವೈದ್ಯಕೀಯ ತಪಾಸಣೆ ಹಾಗೂ ಮಾಹಿತಿ ಶಿಬಿರ, ಫುಟ್‍ಬಾಲ್, ಬ್ಯಾಡ್‍ಮಿಂಟನ್ ಪಂದ್ಯಾಟವನ್ನು ಹಮ್ಮಿಕೊಳ್ಳಲಾಗಿದೆ. ಡಾ. ಕುರುಂಜಿ ವೆಂಕಟ್ರಮಣ ಗೌಡರವರಿಂದ ಸುಳ್ಯದ ಅಭಿವೃದ್ಧಿ ಮತ್ತು ಕೊಡುಗೆಗಳ ಬಗ್ಗೆ ವಿಚಾರ ವಿನಿಮಯ ಕಾರ್ಯಕ್ರಮ ಡಿ.23ರಂದು ಹಮ್ಮಿಕೊಳ್ಳಲಾಗಿದೆ ಎಂದು ಶೈಲೇಶ್ ಅಂಬೆಕಲ್ಲು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ಸಂಘದ ಕಾರ್ಯದರ್ಶಿ ಜಯಂತ ರೈ, ಗಂಗಾಧರ ಮಟ್ಟಿ, ಹರೀಶ್ ಬಂಟ್ವಾಳ್ ಇದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

17 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

24 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

1 day ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

1 day ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago