ಗುತ್ತಿಗಾರು: ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕದಲ್ಲಿ 25ನೇ ವರ್ಷದ ಪೂಜೋತ್ಸವ ಮತ್ತು 14ನೇ ವರ್ಷದ ಅಪ್ಪ ಸೇವೆ ಹಾಗೂ ಅಗ್ನಿ ಸೇವೆ ಡಿ.24 ರಂದು ನಡೆಯಲಿದೆ.
ಕಾರ್ಯಕ್ರಮವು ಗೋಪಾಲ ಗುರುಸ್ವಾಮಿ , ಮೋಹನ್ದಾಸ್ ಗುರುಸ್ವಾಮಿ , ಸೀತಾರಾಮ ಗುರುಸ್ವಾಮಿ , ದಾಮೋದರ ಗುರುಸ್ವಾಮಿ ಹಾಗೂ ಬಾಲಕೃಷ್ಣ ಗುರುಸ್ವಾಮಿ ಪಾಜಪಳ್ಳ ಇವರ ನೇತೃತ್ವದಲ್ಲಿ ನಡೆಯಲಿದೆ. ಡಿ.24 ರಂದು ಬೆಳಗ್ಗೆ ಗಣಪತಿ ಹವನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 5ರಿಂದ ಅಯ್ಯಪ್ಪ ಭಕ್ತಾದಿಗಳು ಕೊಚ್ಚಿ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕಟ್ಟ ಗೋವಿಂದ ನಗರದಿಂದ ಹೊರಟು ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಬಂದು ಅಲ್ಲಿಂದ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರಕ್ಕೆ ಮಕ್ಕಳಿಂದ ದೀಪಾರಾಧನೆಯ ಬೆಳಕು ಹಾಗೂ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇವರ ಚೆಂಡೆ ವಾದನದೊಂದಿಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾಲ್ ಕೊಂಬು ಮೆರವಣಿಗೆ ನಡೆಯಲಿರುವುದು.
ಡಿ. 25 ಬುಧವಾರ ಬೆಳಿಗ್ಗೆ ಗಂಟೆ 4 ಕ್ಕೆ ಅಗ್ನಿ ಸೇವೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಹೆಚ್ಚಿನ ವಿವರಗಳನ್ನು ಪಡೆಯಲು ಜ್ಯೋತಿಷ್ಯರೊಂದಿಗೆ ಸಂಪರ್ಕಿಸಬಹುದು. 9535156490
ಜಗತ್ತಿನಲ್ಲಿ ಎಲ್ಲವನ್ನೂ ಹಣದಿಂದಲೇ ಖರೀದಿ ಮಾಡಲು ಸಾಧ್ಯವಿಲ್ಲ. ನೀತಿ, ನಡತೆ, ಬದ್ಧತೆಗಳು ಹಣ ಕೊಟ್ಟರೂ…
ಯಕ್ಷಗುರು, ಭಾಗವತ ಶ್ರೀ ಪಾಲೆಚ್ಚಾರು ಗೋವಿಂದ ನಾಯಕ್ ಅವರಿಗೆ ‘ಈಶಾವಾಸ್ಯ ಪ್ರಶಸ್ತಿ ಪುರಸ್ಕಾರ’…
ಬೆಂಗಳೂರು ನಗರದಲ್ಲಿ ಮೇ ತಿಂಗಳಲ್ಲಿ 315 ಮಿಲಿಮೀಟರ್ ಮಳೆಯಾಗಿದ್ದು, ಇದು ಸಾರ್ವಕಾಲಿಕ ದಾಖಲೆಯಾಗಿದೆ.…
ಹಾಲು ಉತ್ಪಾದನೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ಮುಂಚೂಣಿಯಲ್ಲಿದ್ದು, ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ…
ಕೇರಳದ ವಯನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ…