ಗುತ್ತಿಗಾರು: ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕದಲ್ಲಿ 25ನೇ ವರ್ಷದ ಪೂಜೋತ್ಸವ ಮತ್ತು 14ನೇ ವರ್ಷದ ಅಪ್ಪ ಸೇವೆ ಹಾಗೂ ಅಗ್ನಿ ಸೇವೆ ಡಿ.24 ರಂದು ನಡೆಯಲಿದೆ.
ಕಾರ್ಯಕ್ರಮವು ಗೋಪಾಲ ಗುರುಸ್ವಾಮಿ , ಮೋಹನ್ದಾಸ್ ಗುರುಸ್ವಾಮಿ , ಸೀತಾರಾಮ ಗುರುಸ್ವಾಮಿ , ದಾಮೋದರ ಗುರುಸ್ವಾಮಿ ಹಾಗೂ ಬಾಲಕೃಷ್ಣ ಗುರುಸ್ವಾಮಿ ಪಾಜಪಳ್ಳ ಇವರ ನೇತೃತ್ವದಲ್ಲಿ ನಡೆಯಲಿದೆ. ಡಿ.24 ರಂದು ಬೆಳಗ್ಗೆ ಗಣಪತಿ ಹವನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 5ರಿಂದ ಅಯ್ಯಪ್ಪ ಭಕ್ತಾದಿಗಳು ಕೊಚ್ಚಿ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕಟ್ಟ ಗೋವಿಂದ ನಗರದಿಂದ ಹೊರಟು ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಬಂದು ಅಲ್ಲಿಂದ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರಕ್ಕೆ ಮಕ್ಕಳಿಂದ ದೀಪಾರಾಧನೆಯ ಬೆಳಕು ಹಾಗೂ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇವರ ಚೆಂಡೆ ವಾದನದೊಂದಿಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾಲ್ ಕೊಂಬು ಮೆರವಣಿಗೆ ನಡೆಯಲಿರುವುದು.
ಡಿ. 25 ಬುಧವಾರ ಬೆಳಿಗ್ಗೆ ಗಂಟೆ 4 ಕ್ಕೆ ಅಗ್ನಿ ಸೇವೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…