ಗುತ್ತಿಗಾರು: ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕದಲ್ಲಿ 25ನೇ ವರ್ಷದ ಪೂಜೋತ್ಸವ ಮತ್ತು 14ನೇ ವರ್ಷದ ಅಪ್ಪ ಸೇವೆ ಹಾಗೂ ಅಗ್ನಿ ಸೇವೆ ಡಿ.24 ರಂದು ನಡೆಯಲಿದೆ.
ಕಾರ್ಯಕ್ರಮವು ಗೋಪಾಲ ಗುರುಸ್ವಾಮಿ , ಮೋಹನ್ದಾಸ್ ಗುರುಸ್ವಾಮಿ , ಸೀತಾರಾಮ ಗುರುಸ್ವಾಮಿ , ದಾಮೋದರ ಗುರುಸ್ವಾಮಿ ಹಾಗೂ ಬಾಲಕೃಷ್ಣ ಗುರುಸ್ವಾಮಿ ಪಾಜಪಳ್ಳ ಇವರ ನೇತೃತ್ವದಲ್ಲಿ ನಡೆಯಲಿದೆ. ಡಿ.24 ರಂದು ಬೆಳಗ್ಗೆ ಗಣಪತಿ ಹವನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 5ರಿಂದ ಅಯ್ಯಪ್ಪ ಭಕ್ತಾದಿಗಳು ಕೊಚ್ಚಿ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕಟ್ಟ ಗೋವಿಂದ ನಗರದಿಂದ ಹೊರಟು ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಬಂದು ಅಲ್ಲಿಂದ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರಕ್ಕೆ ಮಕ್ಕಳಿಂದ ದೀಪಾರಾಧನೆಯ ಬೆಳಕು ಹಾಗೂ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇವರ ಚೆಂಡೆ ವಾದನದೊಂದಿಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾಲ್ ಕೊಂಬು ಮೆರವಣಿಗೆ ನಡೆಯಲಿರುವುದು.
ಡಿ. 25 ಬುಧವಾರ ಬೆಳಿಗ್ಗೆ ಗಂಟೆ 4 ಕ್ಕೆ ಅಗ್ನಿ ಸೇವೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…