ಗುತ್ತಿಗಾರು: ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕದಲ್ಲಿ 25ನೇ ವರ್ಷದ ಪೂಜೋತ್ಸವ ಮತ್ತು 14ನೇ ವರ್ಷದ ಅಪ್ಪ ಸೇವೆ ಹಾಗೂ ಅಗ್ನಿ ಸೇವೆ ಡಿ.24 ರಂದು ನಡೆಯಲಿದೆ.
ಕಾರ್ಯಕ್ರಮವು ಗೋಪಾಲ ಗುರುಸ್ವಾಮಿ , ಮೋಹನ್ದಾಸ್ ಗುರುಸ್ವಾಮಿ , ಸೀತಾರಾಮ ಗುರುಸ್ವಾಮಿ , ದಾಮೋದರ ಗುರುಸ್ವಾಮಿ ಹಾಗೂ ಬಾಲಕೃಷ್ಣ ಗುರುಸ್ವಾಮಿ ಪಾಜಪಳ್ಳ ಇವರ ನೇತೃತ್ವದಲ್ಲಿ ನಡೆಯಲಿದೆ. ಡಿ.24 ರಂದು ಬೆಳಗ್ಗೆ ಗಣಪತಿ ಹವನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 5ರಿಂದ ಅಯ್ಯಪ್ಪ ಭಕ್ತಾದಿಗಳು ಕೊಚ್ಚಿ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕಟ್ಟ ಗೋವಿಂದ ನಗರದಿಂದ ಹೊರಟು ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಬಂದು ಅಲ್ಲಿಂದ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರಕ್ಕೆ ಮಕ್ಕಳಿಂದ ದೀಪಾರಾಧನೆಯ ಬೆಳಕು ಹಾಗೂ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇವರ ಚೆಂಡೆ ವಾದನದೊಂದಿಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾಲ್ ಕೊಂಬು ಮೆರವಣಿಗೆ ನಡೆಯಲಿರುವುದು.
ಡಿ. 25 ಬುಧವಾರ ಬೆಳಿಗ್ಗೆ ಗಂಟೆ 4 ಕ್ಕೆ ಅಗ್ನಿ ಸೇವೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…