ಗುತ್ತಿಗಾರು: ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರ ಹರಿಹರ ಪಳ್ಳತ್ತಡ್ಕದಲ್ಲಿ 25ನೇ ವರ್ಷದ ಪೂಜೋತ್ಸವ ಮತ್ತು 14ನೇ ವರ್ಷದ ಅಪ್ಪ ಸೇವೆ ಹಾಗೂ ಅಗ್ನಿ ಸೇವೆ ಡಿ.24 ರಂದು ನಡೆಯಲಿದೆ.
ಕಾರ್ಯಕ್ರಮವು ಗೋಪಾಲ ಗುರುಸ್ವಾಮಿ , ಮೋಹನ್ದಾಸ್ ಗುರುಸ್ವಾಮಿ , ಸೀತಾರಾಮ ಗುರುಸ್ವಾಮಿ , ದಾಮೋದರ ಗುರುಸ್ವಾಮಿ ಹಾಗೂ ಬಾಲಕೃಷ್ಣ ಗುರುಸ್ವಾಮಿ ಪಾಜಪಳ್ಳ ಇವರ ನೇತೃತ್ವದಲ್ಲಿ ನಡೆಯಲಿದೆ. ಡಿ.24 ರಂದು ಬೆಳಗ್ಗೆ ಗಣಪತಿ ಹವನ, ಸಾಮೂಹಿಕ ಸತ್ಯನಾರಾಯಣ ಪೂಜೆ, ಸಂಜೆ 7 ಗಂಟೆಗೆ ಭಜನಾ ಕಾರ್ಯಕ್ರಮ ನಡೆಯಲಿದೆ.
ಸಂಜೆ ಗಂಟೆ 5ರಿಂದ ಅಯ್ಯಪ್ಪ ಭಕ್ತಾದಿಗಳು ಕೊಚ್ಚಿ ಶ್ರೀ ಮಯೂರ ವಾಹನ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನ ಕಟ್ಟ ಗೋವಿಂದ ನಗರದಿಂದ ಹೊರಟು ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ಬಂದು ಅಲ್ಲಿಂದ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರಕ್ಕೆ ಮಕ್ಕಳಿಂದ ದೀಪಾರಾಧನೆಯ ಬೆಳಕು ಹಾಗೂ ಮಹಾವಿಷ್ಣು ಸಿಂಗಾರಿ ಮೇಳ ಬಾಳಿಲ ಮುಪ್ಪೇರ್ಯ ಇವರ ಚೆಂಡೆ ವಾದನದೊಂದಿಗೆ ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ಶಬರಿಮಲೆ ಅಯ್ಯಪ್ಪ ಸ್ವಾಮಿಯ ಪಾಲ್ ಕೊಂಬು ಮೆರವಣಿಗೆ ನಡೆಯಲಿರುವುದು.
ಡಿ. 25 ಬುಧವಾರ ಬೆಳಿಗ್ಗೆ ಗಂಟೆ 4 ಕ್ಕೆ ಅಗ್ನಿ ಸೇವೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…