ಮಾಹಿತಿ

ಡಿ.26 : ಕರಾವಳಿ ಜಿಲ್ಲೆ ಕಾಣಲಿದೆ ಅಪರೂಪದ ಸೂರ್ಯಗ್ರಹಣ : ಇನ್ನು ನಡೆಯುವುದು 2064 ರಲ್ಲಿ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು: ಡಿ. 26 ರಂದು ಬಹು ಅಪರೂಪದ ಸೂರ್ಯಗ್ರಹಣಕ್ಕೆ ಖಗೋಳ ವಿಜ್ಞಾನ ಸಾಕ್ಷಿಯಾಗಲಿದೆ. ಬೆಳಿಗ್ಗೆ 8.6 ಕ್ಕೆ ಪ್ರಾರಂಭವಾಗುವ ಕಂಕಣ ಸೂರ್ಯಗ್ರಹಣ ಬೆಳಿಗ್ಗೆ 11.11 ಕ್ಕೆ ಮುಕ್ತಾಯವಾಗಲಿದೆ. ಬೆಳಗ್ಗೆ 9.30ರ ಹೊತ್ತಿಗೆ ಗ್ರಹಣ ಪೂರ್ಣ ಪ್ರಮಾಣದಲ್ಲಿ ಗೋಚರಿಸಲಿದೆ. ಈ ಸಮಯದಲ್ಲಿ ರಾಜ್ಯದ ದೇವಾಲಯಗಳಲ್ಲಿ ಎಂದಿನಂತೆ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಬೆಳಗ್ಗೆಯೇ ದೇವಸ್ಥಾನ ಬಾಗಿಲು ಹಾಕಲಾಗುತ್ತದೆ. ವಿವಿದೆಡೆ ಶಾಂತಿ ಹವನ‌ ನಡೆಯಲಿದೆ.

Advertisement
Advertisement

 

ಇನ್ನು ನಡೆಯುವುದು 2064 ರಲ್ಲಿ…!! ಇದೊಂದು ಕಂಕಣ ಸೂರ್ಯಗ್ರಹಣವಾಗಿದ್ದು, ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಕೊಡಗುಗಳಲ್ಲಿ ಸೂರ್ಯ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಎಂದಿನಂತೆ ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ

 

Advertisement

ಕಂಕಣ ಸೂರ್ಯಗ್ರಹಣ ಎಂದರೇನು? : ಸೂರ್ಯನಿಗೆ ಎದುರಾಗಿ ಚಂದ್ರ ಮತ್ತು ಭೂಮಿ ಒಂದೇ ನೇರದಲ್ಲಿ ಬಂದಾಗ ಚಂದ್ರನ ನೆರಳು ಭೂಮಿಯ ಮೇಲೆ ಬೀಳುತ್ತದೆ. ಆಗ ಸೂರ್ಯಗ್ರಹಣ ಉಂಟಾಗುತ್ತದೆ. ಗ್ರಹಣವನ್ನು ಭೂಮಿಯಿಂದ ನೋಡುವಾಗ ಅದು ಎಷ್ಟು ಭಾಗ ಚಂದ್ರನನ್ನು ಮರೆ ಮಾಡುತ್ತದೆ ಎಂಬುದನ್ನಾಧರಿಸಿ ಗ್ರಹಣ ಖಗ್ರಾಸವೊ, ಪಾರ್ಶ್ವವೊ ಅಥವಾ ಕಂಕಣವೊ ಎಂದು ಹೇಳಲಾಗುತ್ತದೆ. ಪ್ರಸಕ್ತ ಗ್ರಹಣದ ವಿದ್ಯಮಾನದಲ್ಲಿ ವೃತ್ತದೊಳಗಿನ ವೃತ್ತದಂತೆ ಗೋಚರಿಸುತ್ತದೆ. ಸೂರ್ಯನ ಪರಿಧಿಯ ಭಾಗ ಬೆಂಕಿಯ ಬಳೆಯಂತೆ ಕಾಣಿಸುತ್ತದೆ. ಹೀಗಾಗಿ ಇದನ್ನು ಖಗೋಳ ವಿಜ್ಞಾನ ಭಾಷೆಯಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

 

ಗ್ರಹಣ ಸಮಯದಲ್ಲಿ ಹೀಗಿರಬೇಕು : ಗ್ರಹಣ ಸಮಯದಲ್ಲಿ ಪ್ರಾಕೃತಿಕವಾಗಿ ಹಲವು ಬದಲಾವಣೆಗಳಾಗುತ್ತವೆ. ಹೀಗಾಗಿ ಈ ಸಮಯದಲ್ಲಿ ಆಹಾರ ಸೇವಿಸಬಾರದು ಎಂದು ಹೇಳಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಲೆ ಮಹದೇಶ್ವರ ಅರಣ್ಯದಲ್ಲಿ 4 ಹುಲಿಗಳ ಅಸಹಜ ಸಾವು | ತನಿಖೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶ

ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಹಾಗೂ ಮೂರು ಮರಿಗಳು…

3 hours ago

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆ | ರಾಜ್ಯದ ಪ್ರಮುಖ ನದಿ ನೀರಿನ ಒಳ ಹರಿವಿನ ಪ್ರಮಾಣ ಹೆಚ್ಚಳ

ಮಹಾರಾಷ್ಟ್ರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆಯಿರುವುದರಿಂದ…

3 hours ago

ಕೃಷಿ ಮತ್ತು ಆಹಾರೋತ್ಪನ್ನ ವಲಯದಲ್ಲಿ ಹೂಡಿಕೆಗೆ ಅವಕಾಶ

ಉತ್ತರ ಪ್ರದೇಶದ ಆಗ್ರಾ ಬಳಿಯ ಸಿಂಗ್ನಾದಲ್ಲಿ ಅಂತಾರಾಷ್ಟ್ರೀಯ ಆಲೂಗಡ್ಡೆ ದಕ್ಷಿಣ ಏಷ್ಯಾ ಪ್ರಾದೇಶಿಕ…

3 hours ago

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

12 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

12 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

12 hours ago