Advertisement
ಮಾಹಿತಿ

ಡಿ.26 : ಕರಾವಳಿ ಜಿಲ್ಲೆ ಕಾಣಲಿದೆ ಅಪರೂಪದ ಸೂರ್ಯಗ್ರಹಣ : ಇನ್ನು ನಡೆಯುವುದು 2064 ರಲ್ಲಿ…!

Share

ಮಂಗಳೂರು: ಡಿ. 26 ರಂದು ಬಹು ಅಪರೂಪದ ಸೂರ್ಯಗ್ರಹಣಕ್ಕೆ ಖಗೋಳ ವಿಜ್ಞಾನ ಸಾಕ್ಷಿಯಾಗಲಿದೆ. ಬೆಳಿಗ್ಗೆ 8.6 ಕ್ಕೆ ಪ್ರಾರಂಭವಾಗುವ ಕಂಕಣ ಸೂರ್ಯಗ್ರಹಣ ಬೆಳಿಗ್ಗೆ 11.11 ಕ್ಕೆ ಮುಕ್ತಾಯವಾಗಲಿದೆ. ಬೆಳಗ್ಗೆ 9.30ರ ಹೊತ್ತಿಗೆ ಗ್ರಹಣ ಪೂರ್ಣ ಪ್ರಮಾಣದಲ್ಲಿ ಗೋಚರಿಸಲಿದೆ. ಈ ಸಮಯದಲ್ಲಿ ರಾಜ್ಯದ ದೇವಾಲಯಗಳಲ್ಲಿ ಎಂದಿನಂತೆ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಬೆಳಗ್ಗೆಯೇ ದೇವಸ್ಥಾನ ಬಾಗಿಲು ಹಾಕಲಾಗುತ್ತದೆ. ವಿವಿದೆಡೆ ಶಾಂತಿ ಹವನ‌ ನಡೆಯಲಿದೆ.

Advertisement
Advertisement
Advertisement
Advertisement

 

Advertisement

ಇನ್ನು ನಡೆಯುವುದು 2064 ರಲ್ಲಿ…!! ಇದೊಂದು ಕಂಕಣ ಸೂರ್ಯಗ್ರಹಣವಾಗಿದ್ದು, ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಕೊಡಗುಗಳಲ್ಲಿ ಸೂರ್ಯ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಎಂದಿನಂತೆ ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ

Advertisement

 

ಕಂಕಣ ಸೂರ್ಯಗ್ರಹಣ ಎಂದರೇನು? : ಸೂರ್ಯನಿಗೆ ಎದುರಾಗಿ ಚಂದ್ರ ಮತ್ತು ಭೂಮಿ ಒಂದೇ ನೇರದಲ್ಲಿ ಬಂದಾಗ ಚಂದ್ರನ ನೆರಳು ಭೂಮಿಯ ಮೇಲೆ ಬೀಳುತ್ತದೆ. ಆಗ ಸೂರ್ಯಗ್ರಹಣ ಉಂಟಾಗುತ್ತದೆ. ಗ್ರಹಣವನ್ನು ಭೂಮಿಯಿಂದ ನೋಡುವಾಗ ಅದು ಎಷ್ಟು ಭಾಗ ಚಂದ್ರನನ್ನು ಮರೆ ಮಾಡುತ್ತದೆ ಎಂಬುದನ್ನಾಧರಿಸಿ ಗ್ರಹಣ ಖಗ್ರಾಸವೊ, ಪಾರ್ಶ್ವವೊ ಅಥವಾ ಕಂಕಣವೊ ಎಂದು ಹೇಳಲಾಗುತ್ತದೆ. ಪ್ರಸಕ್ತ ಗ್ರಹಣದ ವಿದ್ಯಮಾನದಲ್ಲಿ ವೃತ್ತದೊಳಗಿನ ವೃತ್ತದಂತೆ ಗೋಚರಿಸುತ್ತದೆ. ಸೂರ್ಯನ ಪರಿಧಿಯ ಭಾಗ ಬೆಂಕಿಯ ಬಳೆಯಂತೆ ಕಾಣಿಸುತ್ತದೆ. ಹೀಗಾಗಿ ಇದನ್ನು ಖಗೋಳ ವಿಜ್ಞಾನ ಭಾಷೆಯಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

Advertisement

 

ಗ್ರಹಣ ಸಮಯದಲ್ಲಿ ಹೀಗಿರಬೇಕು : ಗ್ರಹಣ ಸಮಯದಲ್ಲಿ ಪ್ರಾಕೃತಿಕವಾಗಿ ಹಲವು ಬದಲಾವಣೆಗಳಾಗುತ್ತವೆ. ಹೀಗಾಗಿ ಈ ಸಮಯದಲ್ಲಿ ಆಹಾರ ಸೇವಿಸಬಾರದು ಎಂದು ಹೇಳಲಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

4 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

5 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

6 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

15 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

15 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

15 hours ago