Advertisement
ಮಾಹಿತಿ

ಡಿ.26 : ಕರಾವಳಿ ಜಿಲ್ಲೆ ಕಾಣಲಿದೆ ಅಪರೂಪದ ಸೂರ್ಯಗ್ರಹಣ : ಇನ್ನು ನಡೆಯುವುದು 2064 ರಲ್ಲಿ…!

Share

ಮಂಗಳೂರು: ಡಿ. 26 ರಂದು ಬಹು ಅಪರೂಪದ ಸೂರ್ಯಗ್ರಹಣಕ್ಕೆ ಖಗೋಳ ವಿಜ್ಞಾನ ಸಾಕ್ಷಿಯಾಗಲಿದೆ. ಬೆಳಿಗ್ಗೆ 8.6 ಕ್ಕೆ ಪ್ರಾರಂಭವಾಗುವ ಕಂಕಣ ಸೂರ್ಯಗ್ರಹಣ ಬೆಳಿಗ್ಗೆ 11.11 ಕ್ಕೆ ಮುಕ್ತಾಯವಾಗಲಿದೆ. ಬೆಳಗ್ಗೆ 9.30ರ ಹೊತ್ತಿಗೆ ಗ್ರಹಣ ಪೂರ್ಣ ಪ್ರಮಾಣದಲ್ಲಿ ಗೋಚರಿಸಲಿದೆ. ಈ ಸಮಯದಲ್ಲಿ ರಾಜ್ಯದ ದೇವಾಲಯಗಳಲ್ಲಿ ಎಂದಿನಂತೆ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಬೆಳಗ್ಗೆಯೇ ದೇವಸ್ಥಾನ ಬಾಗಿಲು ಹಾಕಲಾಗುತ್ತದೆ. ವಿವಿದೆಡೆ ಶಾಂತಿ ಹವನ‌ ನಡೆಯಲಿದೆ.

 

ಇನ್ನು ನಡೆಯುವುದು 2064 ರಲ್ಲಿ…!! ಇದೊಂದು ಕಂಕಣ ಸೂರ್ಯಗ್ರಹಣವಾಗಿದ್ದು, ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಕೊಡಗುಗಳಲ್ಲಿ ಸೂರ್ಯ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಎಂದಿನಂತೆ ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ

 

ಕಂಕಣ ಸೂರ್ಯಗ್ರಹಣ ಎಂದರೇನು? : ಸೂರ್ಯನಿಗೆ ಎದುರಾಗಿ ಚಂದ್ರ ಮತ್ತು ಭೂಮಿ ಒಂದೇ ನೇರದಲ್ಲಿ ಬಂದಾಗ ಚಂದ್ರನ ನೆರಳು ಭೂಮಿಯ ಮೇಲೆ ಬೀಳುತ್ತದೆ. ಆಗ ಸೂರ್ಯಗ್ರಹಣ ಉಂಟಾಗುತ್ತದೆ. ಗ್ರಹಣವನ್ನು ಭೂಮಿಯಿಂದ ನೋಡುವಾಗ ಅದು ಎಷ್ಟು ಭಾಗ ಚಂದ್ರನನ್ನು ಮರೆ ಮಾಡುತ್ತದೆ ಎಂಬುದನ್ನಾಧರಿಸಿ ಗ್ರಹಣ ಖಗ್ರಾಸವೊ, ಪಾರ್ಶ್ವವೊ ಅಥವಾ ಕಂಕಣವೊ ಎಂದು ಹೇಳಲಾಗುತ್ತದೆ. ಪ್ರಸಕ್ತ ಗ್ರಹಣದ ವಿದ್ಯಮಾನದಲ್ಲಿ ವೃತ್ತದೊಳಗಿನ ವೃತ್ತದಂತೆ ಗೋಚರಿಸುತ್ತದೆ. ಸೂರ್ಯನ ಪರಿಧಿಯ ಭಾಗ ಬೆಂಕಿಯ ಬಳೆಯಂತೆ ಕಾಣಿಸುತ್ತದೆ. ಹೀಗಾಗಿ ಇದನ್ನು ಖಗೋಳ ವಿಜ್ಞಾನ ಭಾಷೆಯಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

 

ಗ್ರಹಣ ಸಮಯದಲ್ಲಿ ಹೀಗಿರಬೇಕು : ಗ್ರಹಣ ಸಮಯದಲ್ಲಿ ಪ್ರಾಕೃತಿಕವಾಗಿ ಹಲವು ಬದಲಾವಣೆಗಳಾಗುತ್ತವೆ. ಹೀಗಾಗಿ ಈ ಸಮಯದಲ್ಲಿ ಆಹಾರ ಸೇವಿಸಬಾರದು ಎಂದು ಹೇಳಲಾಗುತ್ತದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ: ಪಶ್ಚಿಮಘಟ್ಟದ 1,449 ಗ್ರಾಮಗಳ ಬಗ್ಗೆ ಆತಂಕ ಬೇಡ ಎಂದ ಪರಮೇಶ್ವರ್

ಕಸ್ತೂರಿ ರಂಗನ್ ವರದಿಯನ್ನು ಯಾವುದೇ ಕಾರಣಕ್ಕೂ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಉಪಮುಖ್ಯಮಂತ್ರಿ…

8 hours ago

ಕರ್ನಾಟಕದ 101 ತಾಲ್ಲೂಕುಗಳು ಬರಪೀಡಿತ : ಇನ್ನೂ 3 ತಾಲ್ಲೂಕುಗಳ ಮೇಲೂ ಬರದ ಛಾಯೆ

ರಾಜ್ಯದ 101 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, 89 ತೀವ್ರ ಹಾಗೂ 12…

8 hours ago

101 ತಾಲೂಕುಗಳಲ್ಲಿ ಬರದ ಛಾಯೆ – ಗ್ರಾಮೀಣರಿಗೆ ಉದ್ಯೋಗ ಹೆಚ್ಚಿಸಲು ಸಚಿವ ಖಂಡ್ರೆ ಸೂಚನೆ

ರಾಜ್ಯದ 101 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮೀಣ ಜನರ ಬೇಡಿಕೆಗೆ ಅನುಗುಣವಾಗಿ…

8 hours ago

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

15 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

3 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

3 days ago