Advertisement
ಮಾಹಿತಿ

ಡಿ.26 : ಕರಾವಳಿ ಜಿಲ್ಲೆ ಕಾಣಲಿದೆ ಅಪರೂಪದ ಸೂರ್ಯಗ್ರಹಣ : ಇನ್ನು ನಡೆಯುವುದು 2064 ರಲ್ಲಿ…!

Share

ಮಂಗಳೂರು: ಡಿ. 26 ರಂದು ಬಹು ಅಪರೂಪದ ಸೂರ್ಯಗ್ರಹಣಕ್ಕೆ ಖಗೋಳ ವಿಜ್ಞಾನ ಸಾಕ್ಷಿಯಾಗಲಿದೆ. ಬೆಳಿಗ್ಗೆ 8.6 ಕ್ಕೆ ಪ್ರಾರಂಭವಾಗುವ ಕಂಕಣ ಸೂರ್ಯಗ್ರಹಣ ಬೆಳಿಗ್ಗೆ 11.11 ಕ್ಕೆ ಮುಕ್ತಾಯವಾಗಲಿದೆ. ಬೆಳಗ್ಗೆ 9.30ರ ಹೊತ್ತಿಗೆ ಗ್ರಹಣ ಪೂರ್ಣ ಪ್ರಮಾಣದಲ್ಲಿ ಗೋಚರಿಸಲಿದೆ. ಈ ಸಮಯದಲ್ಲಿ ರಾಜ್ಯದ ದೇವಾಲಯಗಳಲ್ಲಿ ಎಂದಿನಂತೆ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಬೆಳಗ್ಗೆಯೇ ದೇವಸ್ಥಾನ ಬಾಗಿಲು ಹಾಕಲಾಗುತ್ತದೆ. ವಿವಿದೆಡೆ ಶಾಂತಿ ಹವನ‌ ನಡೆಯಲಿದೆ.

 

ಇನ್ನು ನಡೆಯುವುದು 2064 ರಲ್ಲಿ…!! ಇದೊಂದು ಕಂಕಣ ಸೂರ್ಯಗ್ರಹಣವಾಗಿದ್ದು, ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಕೊಡಗುಗಳಲ್ಲಿ ಸೂರ್ಯ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಎಂದಿನಂತೆ ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ

 

ಕಂಕಣ ಸೂರ್ಯಗ್ರಹಣ ಎಂದರೇನು? : ಸೂರ್ಯನಿಗೆ ಎದುರಾಗಿ ಚಂದ್ರ ಮತ್ತು ಭೂಮಿ ಒಂದೇ ನೇರದಲ್ಲಿ ಬಂದಾಗ ಚಂದ್ರನ ನೆರಳು ಭೂಮಿಯ ಮೇಲೆ ಬೀಳುತ್ತದೆ. ಆಗ ಸೂರ್ಯಗ್ರಹಣ ಉಂಟಾಗುತ್ತದೆ. ಗ್ರಹಣವನ್ನು ಭೂಮಿಯಿಂದ ನೋಡುವಾಗ ಅದು ಎಷ್ಟು ಭಾಗ ಚಂದ್ರನನ್ನು ಮರೆ ಮಾಡುತ್ತದೆ ಎಂಬುದನ್ನಾಧರಿಸಿ ಗ್ರಹಣ ಖಗ್ರಾಸವೊ, ಪಾರ್ಶ್ವವೊ ಅಥವಾ ಕಂಕಣವೊ ಎಂದು ಹೇಳಲಾಗುತ್ತದೆ. ಪ್ರಸಕ್ತ ಗ್ರಹಣದ ವಿದ್ಯಮಾನದಲ್ಲಿ ವೃತ್ತದೊಳಗಿನ ವೃತ್ತದಂತೆ ಗೋಚರಿಸುತ್ತದೆ. ಸೂರ್ಯನ ಪರಿಧಿಯ ಭಾಗ ಬೆಂಕಿಯ ಬಳೆಯಂತೆ ಕಾಣಿಸುತ್ತದೆ. ಹೀಗಾಗಿ ಇದನ್ನು ಖಗೋಳ ವಿಜ್ಞಾನ ಭಾಷೆಯಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

 

ಗ್ರಹಣ ಸಮಯದಲ್ಲಿ ಹೀಗಿರಬೇಕು : ಗ್ರಹಣ ಸಮಯದಲ್ಲಿ ಪ್ರಾಕೃತಿಕವಾಗಿ ಹಲವು ಬದಲಾವಣೆಗಳಾಗುತ್ತವೆ. ಹೀಗಾಗಿ ಈ ಸಮಯದಲ್ಲಿ ಆಹಾರ ಸೇವಿಸಬಾರದು ಎಂದು ಹೇಳಲಾಗುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಉದ್ಯೋಗಾಕಾಂಕ್ಷಿಗಳಿಗೆ ಅವಕಾಶ | ಜುಲೈ 21ರಂದು ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗೆ ನೇರ ಸಂದರ್ಶನ

ಕ್ಯಾಲಿಬರ್ ಕಂಪೆನಿ ವತಿಯಿಂದ ಕ್ರೆಡಿಟ್ ಕಾರ್ಡ್ ಸೇಲ್ಸ್ ಟೀಮ್ ಲೀಡರ್ ಹುದ್ದೆಗಳಿಗೆ ಜುಲೈ…

1 hour ago

ಜುಲೈ 31 ರೊಳಗೆ ಬೆಳೆವಿಮೆ ನೋಂದಣಿ ಮಾಡಿಸಿಕೊಳ್ಳಿ – ಅಡಿಕೆ, ಕಾಳುಮೆಣಸು ಬೆಳೆಗಾರರಿಗೆ ಅವಕಾಶ

ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಾರರಿಗೆ ಹವಾಮಾನ ಆಧಾರಿತ ಬೆಳೆವಿಮೆ…

2 hours ago

ಕರಾವಳಿ–ಹವಾಮಾನ ವರದಿ | 18-07-2026 | ಮಲೆನಾಡಿನಲ್ಲಿ ಇನ್ನೂ 10 ದಿನ ಮಳೆ ಮುಂದುವರಿಕೆ…! ಉತ್ತರ ಒಳನಾಡಿನಲ್ಲಿ ಜುಲೈ 19 ರಿಂದ ಮಳೆ ಇಳಿಮುಖ

ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಮಳೆ ಮುಂದುವರಿಯುವ…

9 hours ago

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

14 hours ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

3 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago