Advertisement
ಮಾಹಿತಿ

ಡಿ.26 : ಕರಾವಳಿ ಜಿಲ್ಲೆ ಕಾಣಲಿದೆ ಅಪರೂಪದ ಸೂರ್ಯಗ್ರಹಣ : ಇನ್ನು ನಡೆಯುವುದು 2064 ರಲ್ಲಿ…!

Share

ಮಂಗಳೂರು: ಡಿ. 26 ರಂದು ಬಹು ಅಪರೂಪದ ಸೂರ್ಯಗ್ರಹಣಕ್ಕೆ ಖಗೋಳ ವಿಜ್ಞಾನ ಸಾಕ್ಷಿಯಾಗಲಿದೆ. ಬೆಳಿಗ್ಗೆ 8.6 ಕ್ಕೆ ಪ್ರಾರಂಭವಾಗುವ ಕಂಕಣ ಸೂರ್ಯಗ್ರಹಣ ಬೆಳಿಗ್ಗೆ 11.11 ಕ್ಕೆ ಮುಕ್ತಾಯವಾಗಲಿದೆ. ಬೆಳಗ್ಗೆ 9.30ರ ಹೊತ್ತಿಗೆ ಗ್ರಹಣ ಪೂರ್ಣ ಪ್ರಮಾಣದಲ್ಲಿ ಗೋಚರಿಸಲಿದೆ. ಈ ಸಮಯದಲ್ಲಿ ರಾಜ್ಯದ ದೇವಾಲಯಗಳಲ್ಲಿ ಎಂದಿನಂತೆ ಪೂಜೆ-ಪುನಸ್ಕಾರಗಳು ನಡೆಯುವುದಿಲ್ಲ. ಬೆಳಗ್ಗೆಯೇ ದೇವಸ್ಥಾನ ಬಾಗಿಲು ಹಾಕಲಾಗುತ್ತದೆ. ವಿವಿದೆಡೆ ಶಾಂತಿ ಹವನ‌ ನಡೆಯಲಿದೆ.

 

ಇನ್ನು ನಡೆಯುವುದು 2064 ರಲ್ಲಿ…!! ಇದೊಂದು ಕಂಕಣ ಸೂರ್ಯಗ್ರಹಣವಾಗಿದ್ದು, ಈ ರೀತಿಯ ಸೂರ್ಯಗ್ರಹಣ ಆಕಾಶದಲ್ಲಿ ಕಾಣುವುದು ಮುಂದೆ 2064 ನೇ ವರ್ಷದಲ್ಲಿ. ಈ ಸೂರ್ಯಗ್ರಹಣ ಭಾರತದಲ್ಲಿ ಕರ್ನಾಟಕ, ತಮಿಳುನಾಡು ಹಾಗೂ ಕೇರಳದಲ್ಲಿ ಕಾಣಿಸಿಕೊಳ್ಳಲಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ ಶೇ 90 ರಷ್ಟು ಕಂಡರೆ, ಉಳಿದ ಭಾಗದಲ್ಲಿ ಸ್ವಲ್ಪ ಪ್ರಮಾಣದಲ್ಲಿ ಕಾಣಲಿದೆ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.

ಮಂಗಳೂರು, ಉಡುಪಿ ಮತ್ತು ಕೊಡಗುಗಳಲ್ಲಿ ಸೂರ್ಯ ಗ್ರಹಣ ಸ್ಪಷ್ಟವಾಗಿ ಗೋಚರಿಸಲಿದೆ. ಎಂದಿನಂತೆ ಗ್ರಹಣವನ್ನು ಬರಿಗಣ್ಣಿನಿಂದ ನೋಡಬಾರದು ಎಂದು ಮುನ್ನೆಚ್ಚರಿಕೆ ನೀಡಲಾಗಿದೆ

 

ಕಂಕಣ ಸೂರ್ಯಗ್ರಹಣ ಎಂದರೇನು? : ಸೂರ್ಯನಿಗೆ ಎದುರಾಗಿ ಚಂದ್ರ ಮತ್ತು ಭೂಮಿ ಒಂದೇ ನೇರದಲ್ಲಿ ಬಂದಾಗ ಚಂದ್ರನ ನೆರಳು ಭೂಮಿಯ ಮೇಲೆ ಬೀಳುತ್ತದೆ. ಆಗ ಸೂರ್ಯಗ್ರಹಣ ಉಂಟಾಗುತ್ತದೆ. ಗ್ರಹಣವನ್ನು ಭೂಮಿಯಿಂದ ನೋಡುವಾಗ ಅದು ಎಷ್ಟು ಭಾಗ ಚಂದ್ರನನ್ನು ಮರೆ ಮಾಡುತ್ತದೆ ಎಂಬುದನ್ನಾಧರಿಸಿ ಗ್ರಹಣ ಖಗ್ರಾಸವೊ, ಪಾರ್ಶ್ವವೊ ಅಥವಾ ಕಂಕಣವೊ ಎಂದು ಹೇಳಲಾಗುತ್ತದೆ. ಪ್ರಸಕ್ತ ಗ್ರಹಣದ ವಿದ್ಯಮಾನದಲ್ಲಿ ವೃತ್ತದೊಳಗಿನ ವೃತ್ತದಂತೆ ಗೋಚರಿಸುತ್ತದೆ. ಸೂರ್ಯನ ಪರಿಧಿಯ ಭಾಗ ಬೆಂಕಿಯ ಬಳೆಯಂತೆ ಕಾಣಿಸುತ್ತದೆ. ಹೀಗಾಗಿ ಇದನ್ನು ಖಗೋಳ ವಿಜ್ಞಾನ ಭಾಷೆಯಲ್ಲಿ ಕಂಕಣ ಸೂರ್ಯಗ್ರಹಣ ಎಂದು ಕರೆಯುತ್ತಾರೆ.

 

ಗ್ರಹಣ ಸಮಯದಲ್ಲಿ ಹೀಗಿರಬೇಕು : ಗ್ರಹಣ ಸಮಯದಲ್ಲಿ ಪ್ರಾಕೃತಿಕವಾಗಿ ಹಲವು ಬದಲಾವಣೆಗಳಾಗುತ್ತವೆ. ಹೀಗಾಗಿ ಈ ಸಮಯದಲ್ಲಿ ಆಹಾರ ಸೇವಿಸಬಾರದು ಎಂದು ಹೇಳಲಾಗುತ್ತದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

21 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

1 day ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

2 days ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

2 days ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

2 days ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

2 days ago