Advertisement
ಕಾರ್ಯಕ್ರಮಗಳು

ಡಿ.14 ಮತ್ತು 15 ಇಂಟರ್ಯಾಕ್ಟ್ ಕ್ಲಬ್‍ಗಳ ಜಿಲ್ಲಾ ಸಮಾವೇಶ

Share

ಸುಳ್ಯ: ಸುಳ್ಯದ ರೋಟರಿ ಕ್ಲಬ್, ರೋಟರಿ ಕ್ಲಬ್ ಸುಳ್ಯ ಸಿಟಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಇಂಟರಾಕ್ಟ್ ಕ್ಲಬ್ ಗಳ ಜಿಲ್ಲಾ ಸಮಾವೇಶ-`ಚಿನ್ನಾರಿ’ ಡಿ.14 ಮತ್ತು 15 ರಂದು ಮಿತ್ತಡ್ಕದ ರೋಟರಿ ವಿದ್ಯಾಸಂಸ್ಥೆಗಳ ವಠಾರದಲ್ಲಿ ನಡೆಯಲಿದೆ.

ದ.ಕ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರೋಟರಿ ಕ್ಲಬ್ ಮತ್ತು ಇಂಟರಾಕ್ಟ್ ಕ್ಲಬ್‍ಗಳ ಸುಮಾರು 700 ರಷ್ಟು ರೊಟೇರಿಯನ್ನರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಳ್ಳಲಿರುವ ಈ ಸಮಾವೇಶದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ. `ಮಿಸೆಸ್ ಕರ್ನಾಟಕ’ ಪ್ರಶಸ್ತಿ ವಿಜೇತೆ ದೀಪಿಕಾ ಅಡ್ತಲೆ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲಾ ಸ್ಪೋರ್ಟ್ಸ್ ಚೇರ್‍ಮನ್ ವಿಶ್ವಾಸ್ ಶೆಣೈ ಮತ್ತು ಜಿಲ್ಲಾ ಇಂಟರಾಕ್ಟ್ ಸಭಾಪತಿ ಡಾ.ಸೂರ್ಯನಾರಾಯಣ ಕೆ ಅತಿಥಿಗಳಾಗಿರುತ್ತಾರೆ. ಬಳಿಕ ಅತಿಥೇಯ ರೋಟರಿ ವಿದ್ಯಾಸಂಸ್ಥೆಗಳ ಇಂಟರಾಕ್ಟ್ ಸದಸ್ಯರಿಂದ ಉದ್ಘಾಟನಾ ಸಾಂಸ್ಕ್ರತಿಕ ಪ್ರದರ್ಶನ, ಸಾಂಸ್ಕ್ರತಿಕ ಸ್ಪರ್ಧೆಗಳು ನಡೆಯಲಿವೆ.

ಡಿ.15ರಂದು ಬೆಳಿಗ್ಗೆ ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ಸಮಾವೇಶವನ್ನು ಉದ್ಘಾಟಿಸುವರು. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ ತುಷಾರ್ ಕೆ , ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ಮುಂದಿನ ಸಾಲಿನ ಜಿಲ್ಲಾ ಗವರ್ನರ್ ರವೀಂದ್ರ ಭಟ್, ವಲಯ 5 ರ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ ಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿಚಾರ ಗೋಷ್ಟಿಗಳು ನಡೆಯಲಿದೆ. `ವ್ಯಕ್ತಿತ್ವ ವಿಕಸನ ಹಾಗೂ ಸಂವಹನ ಕಲೆ’ ವಿಷಯವಾಗಿ ರಾಷ್ಟ್ರೀಯ ತರಬೇತುದಾರರಾದ ಎಂ.ಬಿ. ಜಯರಾಮ ಮಾಹಿತಿ ನೀಡಲಿದ್ದಾರೆ. `ಯುವಜನತೆಯ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ’ ಈ ಕುರಿತು ಪತ್ರಕರ್ತ ಹರಿಪ್ರಸಾದ್ ಅಡ್ಪಂಗಾಯ, `ಸ್ಪರ್ಧಾತ್ಮಕ ಸವಾಲುಗಳನ್ನು ಎದುರಿಸುವುದು ಹೇಗೆ’ ಎಂಬ ವಿಚಾರವಾಗಿ ಜೈ ಮನೋಜ್ ಗೌಡ ವಿಚಾರ ಮಂಡಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‍ನ ನಿರ್ದೇಶಕ ಅಕ್ಷಯ್.ಕೆ.ಸಿ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ಹಾಗೂ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಮುಖ್ಯ ಅತಿಥಿಗಳಾಗಿರುತ್ತಾರೆ ಎಂದು ಸಮಾವೇಶದ ಸಂಯೋಜಕ ಎನ್.ಎ.ಜಿತೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜೇನುಗೂಡುಗಳ ಕೊರತೆಯಿಂದ ಪರಾಗಸ್ಪರ್ಶ ವ್ಯವಸ್ಥೆ ಮೇಲೆ ಪರಿಣಾಮ ; ಕೃಷಿ ಕ್ಷೇತ್ರದಲ್ಲಿ ಆತಂಕ – ಆಹಾರ ಬೆಳೆ ಉತ್ಪಾದನೆಗೆ ಸಂಕಷ್ಟದ ಎಚ್ಚರಿಕೆ

ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…

8 hours ago

ಕಾಸರಗೋಡು ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ – ರೆಡ್ ಅಲರ್ಟ್ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…

9 hours ago

ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ

ಮಲೆನಾಡಿನ ಕೃಷಿ ಸಮಸ್ಯೆಗಳನ್ನು ಪ್ರವಾಸೋದ್ಯಮದ ಅವಕಾಶಗಳಾಗಿ ಪರಿವರ್ತಿಸುವ ಹೊಸ ಪರಿಕಲ್ಪನೆಯನ್ನು ಪ್ರಬಂಧ ಅಂಬುತೀರ್ಥ…

10 hours ago

ನಿಷೇಧಿತ ಗುಟ್ಕಾ ಮಾರಾಟಕ್ಕೆ ಕಡಿವಾಣ | FDA ದಾಳಿ, 14 ಮಂದಿ ಬಂಧನ – ₹32 ಲಕ್ಷ ಮೌಲ್ಯದ ವಸ್ತು ವಶ

ಮಹಾರಾಷ್ಟ್ರ FDA ದಾಳಿಯಲ್ಲಿ 14 ಮಂದಿ ಬಂಧನವಾಗಿದ್ದು, ₹32 ಲಕ್ಷ ಮೌಲ್ಯದ ನಿಷೇಧಿತ…

10 hours ago

ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ

ವಿಶ್ವ ಪರಿಸರ ದಿನಾಚರಣೆಯಲ್ಲಿ ಪರಿಸರ ಸಂರಕ್ಷಣೆಯ ಮಹತ್ವವನ್ನು ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಒತ್ತಿ…

10 hours ago

ಲ್ಯಾಬ್‌ ಟು ಲ್ಯಾಂಡ್ – 13.4 ಕೋಟಿ ರೈತರನ್ನು ತಲುಪಿದ ‘ವಿಕಸಿತ ಕೃಷಿ ಸಂಕಲ್ಪ ಅಭಿಯಾನ’

ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…

13 hours ago