Advertisement
ಕಾರ್ಯಕ್ರಮಗಳು

ಡಿ.14 ಮತ್ತು 15 ಇಂಟರ್ಯಾಕ್ಟ್ ಕ್ಲಬ್‍ಗಳ ಜಿಲ್ಲಾ ಸಮಾವೇಶ

Share

ಸುಳ್ಯ: ಸುಳ್ಯದ ರೋಟರಿ ಕ್ಲಬ್, ರೋಟರಿ ಕ್ಲಬ್ ಸುಳ್ಯ ಸಿಟಿ ಇವರ ಜಂಟಿ ಪ್ರಾಯೋಜಕತ್ವದಲ್ಲಿ ಇಂಟರಾಕ್ಟ್ ಕ್ಲಬ್ ಗಳ ಜಿಲ್ಲಾ ಸಮಾವೇಶ-`ಚಿನ್ನಾರಿ’ ಡಿ.14 ಮತ್ತು 15 ರಂದು ಮಿತ್ತಡ್ಕದ ರೋಟರಿ ವಿದ್ಯಾಸಂಸ್ಥೆಗಳ ವಠಾರದಲ್ಲಿ ನಡೆಯಲಿದೆ.

ದ.ಕ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ರೋಟರಿ ಕ್ಲಬ್ ಮತ್ತು ಇಂಟರಾಕ್ಟ್ ಕ್ಲಬ್‍ಗಳ ಸುಮಾರು 700 ರಷ್ಟು ರೊಟೇರಿಯನ್ನರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳು ಪಾಲ್ಗೊಳ್ಳಲಿರುವ ಈ ಸಮಾವೇಶದಲ್ಲಿ ವಿವಿಧ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳು ನಡೆಯಲಿದೆ. `ಮಿಸೆಸ್ ಕರ್ನಾಟಕ’ ಪ್ರಶಸ್ತಿ ವಿಜೇತೆ ದೀಪಿಕಾ ಅಡ್ತಲೆ ಉದ್ಘಾಟಿಸಲಿದ್ದಾರೆ. ರೋಟರಿ ಜಿಲ್ಲಾ ಸ್ಪೋರ್ಟ್ಸ್ ಚೇರ್‍ಮನ್ ವಿಶ್ವಾಸ್ ಶೆಣೈ ಮತ್ತು ಜಿಲ್ಲಾ ಇಂಟರಾಕ್ಟ್ ಸಭಾಪತಿ ಡಾ.ಸೂರ್ಯನಾರಾಯಣ ಕೆ ಅತಿಥಿಗಳಾಗಿರುತ್ತಾರೆ. ಬಳಿಕ ಅತಿಥೇಯ ರೋಟರಿ ವಿದ್ಯಾಸಂಸ್ಥೆಗಳ ಇಂಟರಾಕ್ಟ್ ಸದಸ್ಯರಿಂದ ಉದ್ಘಾಟನಾ ಸಾಂಸ್ಕ್ರತಿಕ ಪ್ರದರ್ಶನ, ಸಾಂಸ್ಕ್ರತಿಕ ಸ್ಪರ್ಧೆಗಳು ನಡೆಯಲಿವೆ.

ಡಿ.15ರಂದು ಬೆಳಿಗ್ಗೆ ರೋಟರಿ ಜಿಲ್ಲಾ ಗವರ್ನರ್ ಜೋಸೆಫ್ ಮ್ಯಾಥ್ಯೂ ಸಮಾವೇಶವನ್ನು ಉದ್ಘಾಟಿಸುವರು. ಜಿಲ್ಲಾ ಇಂಟರಾಕ್ಟ್ ಪ್ರತಿನಿಧಿ ತುಷಾರ್ ಕೆ , ಉಪವಿಭಾಗಾಧಿಕಾರಿ ಎಚ್.ಕೆ. ಕೃಷ್ಣಮೂರ್ತಿ, ಮುಂದಿನ ಸಾಲಿನ ಜಿಲ್ಲಾ ಗವರ್ನರ್ ರವೀಂದ್ರ ಭಟ್, ವಲಯ 5 ರ ಅಸಿಸ್ಟೆಂಟ್ ಗವರ್ನರ್ ಡಾ.ಕೇಶವ ಪಿ ಕೆ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಬಳಿಕ ವಿಚಾರ ಗೋಷ್ಟಿಗಳು ನಡೆಯಲಿದೆ. `ವ್ಯಕ್ತಿತ್ವ ವಿಕಸನ ಹಾಗೂ ಸಂವಹನ ಕಲೆ’ ವಿಷಯವಾಗಿ ರಾಷ್ಟ್ರೀಯ ತರಬೇತುದಾರರಾದ ಎಂ.ಬಿ. ಜಯರಾಮ ಮಾಹಿತಿ ನೀಡಲಿದ್ದಾರೆ. `ಯುವಜನತೆಯ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ’ ಈ ಕುರಿತು ಪತ್ರಕರ್ತ ಹರಿಪ್ರಸಾದ್ ಅಡ್ಪಂಗಾಯ, `ಸ್ಪರ್ಧಾತ್ಮಕ ಸವಾಲುಗಳನ್ನು ಎದುರಿಸುವುದು ಹೇಗೆ’ ಎಂಬ ವಿಚಾರವಾಗಿ ಜೈ ಮನೋಜ್ ಗೌಡ ವಿಚಾರ ಮಂಡಿಸಲಿದ್ದಾರೆ.

ಸಮಾರೋಪ ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್‍ನ ನಿರ್ದೇಶಕ ಅಕ್ಷಯ್.ಕೆ.ಸಿ ವಿಜೇತರಿಗೆ ಬಹುಮಾನ ವಿತರಿಸಲಿದ್ದಾರೆ. ನಿಯೋಜಿತ ರೋಟರಿ ಜಿಲ್ಲಾ ಗವರ್ನರ್ ರಂಗನಾಥ್ ಭಟ್ ಹಾಗೂ ಸುಳ್ಯ ತಹಶೀಲ್ದಾರ್ ಎನ್.ಎ.ಕುಂಞ ಅಹಮ್ಮದ್ ಮುಖ್ಯ ಅತಿಥಿಗಳಾಗಿರುತ್ತಾರೆ ಎಂದು ಸಮಾವೇಶದ ಸಂಯೋಜಕ ಎನ್.ಎ.ಜಿತೇಂದ್ರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

43 minutes ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

7 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

11 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

19 hours ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

19 hours ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

21 hours ago