Advertisement
MIRROR FOCUS

ಡೆಂಗ್ಯು ದಿನ ಕಳೆಯಿತು….! ಎಲ್ಲೆಡೆ ಬೇಕಿನ್ನು ಎಚ್ಚರ…!

Share

ಸುಳ್ಯ : ಡೆಂಗ್ಯು ಜ್ವರ ಹಾಗೆಯೇ ನಿಧಾನವಾಗಿ ಪಸರಿಸಲು ಆರಂಭವಾಗಿದೆ. ಜನರ ಆರೋಗ್ಯದ ಹಿತದೃಷ್ಠಿಯಿಂದ ಈಗಲೇ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.

ಪ್ರತೀ ಬಾರಿಯೂ ಕೂಡಾ ಡೆಂಗ್ಯು ಜ್ವರದ ಲಕ್ಷಣಗಳು ವಿವಿದೆಡೆ ಕಾಣಿಸುತ್ತದೆ. ವ್ಯಾಪಕವಾಗಿ ಹರಡಿದ ಬಳಿಕ ಇಲಾಖೆಗಳು ಎಚ್ಚೆತ್ತುಕೊಳ್ಳುತ್ತವೆ. ಆ ಬಳಿಕ ಯಾವುದೇ ಕ್ರಮಗಳು ಪರಿಣಾಮವಾಗುವುದಿಲ್ಲ. ಅದಕ್ಕಾಗಿ ಆರಂಭದಲ್ಲಿಯೇ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಈಗಲೇ ಬೇಕಾದ ಎಲ್ಲಾ ಸಿದ್ಧತೆಗಳು ನಡೆಸಿದರೆ ವ್ಯಾಪಕವಾಗಿ ಹರಡಬಹುದಾದ ಸಾಧ್ಯತೆಯನ್ನು ಕಡಿಮೆ ಮಾಡಬಹುದು.  ಇದುವರೆಗಿನ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ  ಇದುವರೆಗೆ ಒಟ್ಟು 58 ಡೆಂಗ್ಯು  ಪ್ರಕರಣಗಳು  ದೃಢಪಟ್ಟಿವೆ. ಕಳೆದ ವರ್ಷ ಒಟ್ಟು 600 ಡೆಂಗ್ಯು ಪ್ರಕರಣಗಳು ಅಧಿಕೃತವಾಗಿ ಇಲಾಖೆ ಪ್ರಕಟ ಮಾಡಿತ್ತು.

ಡೆಂಗ್ಯು ಲಕ್ಷಣ ಏನು ? :

ಇದ್ದಕ್ಕಿದ್ದಂತೆಯೇ ತೀವ್ರ ಜ್ವರ, ಹಣೆಯ ಭಾಗದಲ್ಲಿ ನೋವು, ಕಣ್ಣುಗುಡ್ಡೆಗಳಲ್ಲಿ ನೋವು, ಮಾಂಸಖಂಡಗಳಲ್ಲಿ ತೀವ್ರ ನೋವು ಇದ್ದಲ್ಲಿ ಅದನ್ನು ಡೆಂಗ್ಯು ಜ್ವರ ಎಂದು ಅಂದಾಜಿಸಬಹುದು. ಮೈಮೇಲೆ ಕೆಂಪು ಗುಳ್ಳೆಗಳು, ಕಣ್ಣು ಕೆಂಪಾಗುವುದು, ವಸಡು ಹಾಗೂ ಮೂಗಿನಲ್ಲಿ ರಕ್ತಸ್ರಾವದ ಲಕ್ಷಣ, ಕೆಂಪಾದ ಮೂತ್ರ, ಮಲ ಕಪ್ಪಾಗಿದ್ದಲ್ಲಿ ಕೂಡಲೇ ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳಬೇಕು ಎಂದು ಆರೋಗ್ಯ ಇಲಾಖೆಯ ಹೇಳುತ್ತದೆ.

ನಿಯಂತ್ರಣ ಹೇಗೆ ?

ಸೋಂಕು ಹೊಂದಿದ ಈಡಿಸ್ ಈಜಿಪ್ಟೈ ಸೊಳ್ಳೆಗಳಿಂದಾಗಿ ಡೆಂಗ್ಯು ಹರಡುತ್ತದೆ. ಮುಖ್ಯವಾಗಿ ಈ ಸೊಳ್ಳೆಗಳು ಮುಸ್ಸಂಜೆ ಮತ್ತು ಮುಂಜಾನೆಯ ವೇಳೆ ಕಚ್ಚುತ್ತವೆ. ಆದುದರಿಂದ ಡೆಂಗ್ಯು ಜ್ವರದಿಂದ ತೊಂದರೆಗೊಳಗಾದವರು ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಹಗಲು ಹೊತ್ತಿನಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುವ ಮಕ್ಕಳು, ಗರ್ಭಿಣಿಯರು, ಬಾಣಂತಿ, ಹಾಗೂ ವಯಸ್ಸಾದವರು ಕೂಡಾ ಸೊಳ್ಳೆ ಪರದೆ ಉಪಯೋಗಿಸಬೇಕು. ಮನೆಯ ಪರಿಸರದಲ್ಲಿ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ವಿಲೇವಾರಿ, ನೀರು ಸಂಗ್ರಹಿಸುವಾಗ ಭದ್ರವಾದ ಮುಚ್ಚಳ ಅಳವಡಿಸುವುದು, ನೀರು ನಿಲ್ಲದಂತೆ ಎಚ್ಚರ ಸೇರಿದಂತೆ ಮುಂಜಾಗ್ರತೆ ವಹಿಸಬೇಕು.

ಈಗ ಎಲ್ಲಿದೆ ಜ್ವರ ಲಕ್ಷಣ ?

ಸುಳ್ಯ ತಾಲೂಕಿನ ವಿವಿಧ ಕಡೆ ಜ್ವರದ ಪ್ರಕರಣ ಇದೆ. ಆದರೆ ಎಲ್ಲೂ ಡೆಂಗ್ಯು ಬಗ್ಗೆ ವರದಿ ಇಲ್ಲ. ಆದರೆ ಕಡಬ ತಾಲೂಕಿನ ವಿವಿಧ ಕಡೆ ಜ್ವರದ ಲಕ್ಷಣ ಇದೆ. ಕೋಡಿಂಬಾಳ, ಕಲ್ಲುಗುಡ್ಡೆ, ಹೊಸ್ಮಠ, ಮರ್ದಾಳ, ಐತ್ತೂರು ಪ್ರದೇಶಗಳಲ್ಲಿ ಡೆಂಗ್ಯು ಹರಡಿದ ಬಗ್ಗೆ ಸಾರ್ವಜನಿಕರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

1 day ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

1 day ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

1 day ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

1 day ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

2 days ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago