Advertisement
MIRROR FOCUS

ಡೆಂಗ್ಯು ದಿನ ಕಳೆಯಿತು….! ಎಲ್ಲೆಡೆ ಬೇಕಿನ್ನು ಎಚ್ಚರ…!

Share

ಸುಳ್ಯ : ಡೆಂಗ್ಯು ಜ್ವರ ಹಾಗೆಯೇ ನಿಧಾನವಾಗಿ ಪಸರಿಸಲು ಆರಂಭವಾಗಿದೆ. ಜನರ ಆರೋಗ್ಯದ ಹಿತದೃಷ್ಠಿಯಿಂದ ಈಗಲೇ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ.

ಪ್ರತೀ ಬಾರಿಯೂ ಕೂಡಾ ಡೆಂಗ್ಯು ಜ್ವರದ ಲಕ್ಷಣಗಳು ವಿವಿದೆಡೆ ಕಾಣಿಸುತ್ತದೆ. ವ್ಯಾಪಕವಾಗಿ ಹರಡಿದ ಬಳಿಕ ಇಲಾಖೆಗಳು ಎಚ್ಚೆತ್ತುಕೊಳ್ಳುತ್ತವೆ. ಆ ಬಳಿಕ ಯಾವುದೇ ಕ್ರಮಗಳು ಪರಿಣಾಮವಾಗುವುದಿಲ್ಲ. ಅದಕ್ಕಾಗಿ ಆರಂಭದಲ್ಲಿಯೇ ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಈಗಲೇ ಬೇಕಾದ ಎಲ್ಲಾ ಸಿದ್ಧತೆಗಳು ನಡೆಸಿದರೆ ವ್ಯಾಪಕವಾಗಿ ಹರಡಬಹುದಾದ ಸಾಧ್ಯತೆಯನ್ನು ಕಡಿಮೆ ಮಾಡಬಹುದು.  ಇದುವರೆಗಿನ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ  ಇದುವರೆಗೆ ಒಟ್ಟು 58 ಡೆಂಗ್ಯು  ಪ್ರಕರಣಗಳು  ದೃಢಪಟ್ಟಿವೆ. ಕಳೆದ ವರ್ಷ ಒಟ್ಟು 600 ಡೆಂಗ್ಯು ಪ್ರಕರಣಗಳು ಅಧಿಕೃತವಾಗಿ ಇಲಾಖೆ ಪ್ರಕಟ ಮಾಡಿತ್ತು.

ಡೆಂಗ್ಯು ಲಕ್ಷಣ ಏನು ? :

ಇದ್ದಕ್ಕಿದ್ದಂತೆಯೇ ತೀವ್ರ ಜ್ವರ, ಹಣೆಯ ಭಾಗದಲ್ಲಿ ನೋವು, ಕಣ್ಣುಗುಡ್ಡೆಗಳಲ್ಲಿ ನೋವು, ಮಾಂಸಖಂಡಗಳಲ್ಲಿ ತೀವ್ರ ನೋವು ಇದ್ದಲ್ಲಿ ಅದನ್ನು ಡೆಂಗ್ಯು ಜ್ವರ ಎಂದು ಅಂದಾಜಿಸಬಹುದು. ಮೈಮೇಲೆ ಕೆಂಪು ಗುಳ್ಳೆಗಳು, ಕಣ್ಣು ಕೆಂಪಾಗುವುದು, ವಸಡು ಹಾಗೂ ಮೂಗಿನಲ್ಲಿ ರಕ್ತಸ್ರಾವದ ಲಕ್ಷಣ, ಕೆಂಪಾದ ಮೂತ್ರ, ಮಲ ಕಪ್ಪಾಗಿದ್ದಲ್ಲಿ ಕೂಡಲೇ ಜಿಲ್ಲಾಮಟ್ಟದ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಳಬೇಕು ಎಂದು ಆರೋಗ್ಯ ಇಲಾಖೆಯ ಹೇಳುತ್ತದೆ.

ನಿಯಂತ್ರಣ ಹೇಗೆ ?

ಸೋಂಕು ಹೊಂದಿದ ಈಡಿಸ್ ಈಜಿಪ್ಟೈ ಸೊಳ್ಳೆಗಳಿಂದಾಗಿ ಡೆಂಗ್ಯು ಹರಡುತ್ತದೆ. ಮುಖ್ಯವಾಗಿ ಈ ಸೊಳ್ಳೆಗಳು ಮುಸ್ಸಂಜೆ ಮತ್ತು ಮುಂಜಾನೆಯ ವೇಳೆ ಕಚ್ಚುತ್ತವೆ. ಆದುದರಿಂದ ಡೆಂಗ್ಯು ಜ್ವರದಿಂದ ತೊಂದರೆಗೊಳಗಾದವರು ಸೊಳ್ಳೆ ಪರದೆಯನ್ನು ಉಪಯೋಗಿಸಬೇಕು. ಹಗಲು ಹೊತ್ತಿನಲ್ಲಿ ಮನೆಯಲ್ಲಿ ವಿಶ್ರಾಂತಿ ಪಡೆಯುವ ಮಕ್ಕಳು, ಗರ್ಭಿಣಿಯರು, ಬಾಣಂತಿ, ಹಾಗೂ ವಯಸ್ಸಾದವರು ಕೂಡಾ ಸೊಳ್ಳೆ ಪರದೆ ಉಪಯೋಗಿಸಬೇಕು. ಮನೆಯ ಪರಿಸರದಲ್ಲಿ ಸ್ವಚ್ಛತೆ, ಘನತ್ಯಾಜ್ಯ ಸಮರ್ಪಕ ವಿಲೇವಾರಿ, ನೀರು ಸಂಗ್ರಹಿಸುವಾಗ ಭದ್ರವಾದ ಮುಚ್ಚಳ ಅಳವಡಿಸುವುದು, ನೀರು ನಿಲ್ಲದಂತೆ ಎಚ್ಚರ ಸೇರಿದಂತೆ ಮುಂಜಾಗ್ರತೆ ವಹಿಸಬೇಕು.

ಈಗ ಎಲ್ಲಿದೆ ಜ್ವರ ಲಕ್ಷಣ ?

ಸುಳ್ಯ ತಾಲೂಕಿನ ವಿವಿಧ ಕಡೆ ಜ್ವರದ ಪ್ರಕರಣ ಇದೆ. ಆದರೆ ಎಲ್ಲೂ ಡೆಂಗ್ಯು ಬಗ್ಗೆ ವರದಿ ಇಲ್ಲ. ಆದರೆ ಕಡಬ ತಾಲೂಕಿನ ವಿವಿಧ ಕಡೆ ಜ್ವರದ ಲಕ್ಷಣ ಇದೆ. ಕೋಡಿಂಬಾಳ, ಕಲ್ಲುಗುಡ್ಡೆ, ಹೊಸ್ಮಠ, ಮರ್ದಾಳ, ಐತ್ತೂರು ಪ್ರದೇಶಗಳಲ್ಲಿ ಡೆಂಗ್ಯು ಹರಡಿದ ಬಗ್ಗೆ ಸಾರ್ವಜನಿಕರು ಹೇಳುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

10 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago