ಡೆಂಗ್ಯೂ ಜಾಗೃತಿ| ಮಳೆ ಶುರುವಾಯ್ತು- ತಡೆಯಿರಿ ಡೆಂಗ್ಯೂ | ಇಲಾಖೆಗಳಿಂದ ಜಾಗೃತಿ ಅಭಿಯಾನ ಆರಂಭ

June 9, 2020
10:17 PM

ಮಳೆಗಾಲ ಆರಂಭವಾಗಿದೆ. ಈಗ ಕೊರೊನಾ ವೈರಸ್ ನಡುವೆಯೇ ಡೆಂಗ್ಯೂ ಭೀತಿ ಹಲವು ಕಡೆ ಇದೆ. ಹೀಗಾಗಿ ಈಗ ಕೊರೊನಾ ಜೊತೆಗೆ ಡೆಂಗ್ಯೂ ತಡೆಯುವ ಅಬಿಯಾನವೂ ಜೊತೆ ಜೊತೆಗೇ ನಡೆಯಬೇಕಿದೆ. ಗ್ರಾಮದಿಂದ ತೊಡಗಿ ನಗರದವರೆಗೆ ಈಗ ಡೆಂಗ್ಯೂ ಜ್ವರದ ಬಗ್ಗೆ ಕಟ್ಟೆಚ್ಚರ ಬೇಕಿದೆ.

Advertisement
Advertisement

ಮಳೆಗಾಲದ ಆರಂಭದಲ್ಲಿ ಪ್ರತೀ ವರ್ಷವೂ ಡೆಂಗ್ಯೂ ಜ್ವರ ವಿಪರೀತವಾಗಿ ಬಾಧಿಸುತ್ತದೆ. ಕಳೆದ ಎರಡು ವರ್ಷಗಳಿಂದ ದ ಕ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದೆ. ಕಳೆದ ವರ್ಷವಂತೂ ಇಡೀ ಜಿಲ್ಲೆಯೇ ಡೆಂಗ್ಯೂ ಜ್ವರದಿಂದ ತತ್ತರಿಸಿತ್ತು. ಹೀಗಾಗಿ ಈ ಬಾರಿ ಕಟ್ಟೆಚ್ಚರ ಬೇಕಿದೆ. ಜ್ವರದ ಲಕ್ಷಣಗಳು ಇದ್ದರೆ ತಕ್ಷಣವೇ ಸೂಕ್ತ ತಪಾಸಣೆ, ಚಿಕಿತ್ಸೆ ಅಗತ್ಯವಾಗಿದೆ. ಈಗಾಗಲೇ ಅಲ್ಲಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ  ಜಾಗೃತಿ ಕೂಡಾ ನಡೆಯುತ್ತಿದೆ.

ಆರೋಗ್ಯ ಇಲಾಖೆಗೆ ಈ ಬಾರಿ ಸವಾಲಿನ ಕೆಲಸ ಇದೆ. ಒಂದು ಕಡೆ ಕೊರೊನಾ ವೈರಸ್ , ಇನ್ನೊಂದು ಕಡೆ ಡೆಂಗ್ಯೂ ಹರಡುವ ಭೀತಿ. ಹೀಗಾಗಿ ಇಲಾಖೆಯ ಜೊತೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಡೆಂಗ್ಯೂ ಹರಡದಂತೆ, ಬಾರದಂತೆ ಎಚ್ಚರಿಕೆ ವಹಿಸಬೇಕಿದೆ.

ಶಾಂತಿಗೋಡು ಪರಿಸರದ ವ್ಯಾಪ್ತಿಯಲ್ಲಿ ಕಲ್ಲುಕೋಟೆ ಮತ್ತು ಪಣಂಬು ಎಂಬಲ್ಲಿ ಸಂಶಯಾಸ್ಪದ ಡೆಂಗ್ಯೂ ಪ್ರದೇಶಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಮೀನಾಕ್ಷಿ ಶಾಂತಿಗೋಡು ಇವರೊಂದಿಗೆ ತಾಲೂಕು ನೋಡಲ್ ಅಧಿಕಾರಿ ಡಾ. ಬದ್ರುದಿನ್ ಎಂ. ಎನ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮಿತಾ ನಾಯಕ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆ ತಾಲೂಕು ಆಶಾ ಮೇಲ್ವಿಚಾರಕಿ ಸುಜಾತ ಇವರನ್ನೊಳಗೊಂಡ ತಂಡ ಭೇಟಿ ನೀಡಿ, ಡೆಂಗ್ಯೂ ಖಾಯಿಲೆ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಲಾರ್ವಾ ಪ್ರಾತ್ಯಕ್ಷಿಕೆಯನ್ನು ಡೆಂಗ್ಯೂ ಭಾದಿತ ಮನೆಗಳ ಸದಸ್ಯರಿಗೆ ತೋರಿಸಿ ಅರಿವು ಮೂಡಿಸಲಾಯಿತು.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!
February 12, 2026
7:47 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ
February 12, 2026
7:04 AM
by: ಮಿರರ್‌ ಡೆಸ್ಕ್
ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ
February 12, 2026
6:54 AM
by: ದ ರೂರಲ್ ಮಿರರ್.ಕಾಂ
ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ
February 12, 2026
6:47 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror