ಸುದ್ದಿಗಳು

ಡೆಂಗ್ಯೂ ಜಾಗೃತಿ| ಮಳೆ ಶುರುವಾಯ್ತು- ತಡೆಯಿರಿ ಡೆಂಗ್ಯೂ | ಇಲಾಖೆಗಳಿಂದ ಜಾಗೃತಿ ಅಭಿಯಾನ ಆರಂಭ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಳೆಗಾಲ ಆರಂಭವಾಗಿದೆ. ಈಗ ಕೊರೊನಾ ವೈರಸ್ ನಡುವೆಯೇ ಡೆಂಗ್ಯೂ ಭೀತಿ ಹಲವು ಕಡೆ ಇದೆ. ಹೀಗಾಗಿ ಈಗ ಕೊರೊನಾ ಜೊತೆಗೆ ಡೆಂಗ್ಯೂ ತಡೆಯುವ ಅಬಿಯಾನವೂ ಜೊತೆ ಜೊತೆಗೇ ನಡೆಯಬೇಕಿದೆ. ಗ್ರಾಮದಿಂದ ತೊಡಗಿ ನಗರದವರೆಗೆ ಈಗ ಡೆಂಗ್ಯೂ ಜ್ವರದ ಬಗ್ಗೆ ಕಟ್ಟೆಚ್ಚರ ಬೇಕಿದೆ.

Advertisement

ಮಳೆಗಾಲದ ಆರಂಭದಲ್ಲಿ ಪ್ರತೀ ವರ್ಷವೂ ಡೆಂಗ್ಯೂ ಜ್ವರ ವಿಪರೀತವಾಗಿ ಬಾಧಿಸುತ್ತದೆ. ಕಳೆದ ಎರಡು ವರ್ಷಗಳಿಂದ ದ ಕ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದೆ. ಕಳೆದ ವರ್ಷವಂತೂ ಇಡೀ ಜಿಲ್ಲೆಯೇ ಡೆಂಗ್ಯೂ ಜ್ವರದಿಂದ ತತ್ತರಿಸಿತ್ತು. ಹೀಗಾಗಿ ಈ ಬಾರಿ ಕಟ್ಟೆಚ್ಚರ ಬೇಕಿದೆ. ಜ್ವರದ ಲಕ್ಷಣಗಳು ಇದ್ದರೆ ತಕ್ಷಣವೇ ಸೂಕ್ತ ತಪಾಸಣೆ, ಚಿಕಿತ್ಸೆ ಅಗತ್ಯವಾಗಿದೆ. ಈಗಾಗಲೇ ಅಲ್ಲಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ  ಜಾಗೃತಿ ಕೂಡಾ ನಡೆಯುತ್ತಿದೆ.

ಆರೋಗ್ಯ ಇಲಾಖೆಗೆ ಈ ಬಾರಿ ಸವಾಲಿನ ಕೆಲಸ ಇದೆ. ಒಂದು ಕಡೆ ಕೊರೊನಾ ವೈರಸ್ , ಇನ್ನೊಂದು ಕಡೆ ಡೆಂಗ್ಯೂ ಹರಡುವ ಭೀತಿ. ಹೀಗಾಗಿ ಇಲಾಖೆಯ ಜೊತೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಡೆಂಗ್ಯೂ ಹರಡದಂತೆ, ಬಾರದಂತೆ ಎಚ್ಚರಿಕೆ ವಹಿಸಬೇಕಿದೆ.

ಶಾಂತಿಗೋಡು ಪರಿಸರದ ವ್ಯಾಪ್ತಿಯಲ್ಲಿ ಕಲ್ಲುಕೋಟೆ ಮತ್ತು ಪಣಂಬು ಎಂಬಲ್ಲಿ ಸಂಶಯಾಸ್ಪದ ಡೆಂಗ್ಯೂ ಪ್ರದೇಶಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಮೀನಾಕ್ಷಿ ಶಾಂತಿಗೋಡು ಇವರೊಂದಿಗೆ ತಾಲೂಕು ನೋಡಲ್ ಅಧಿಕಾರಿ ಡಾ. ಬದ್ರುದಿನ್ ಎಂ. ಎನ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮಿತಾ ನಾಯಕ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆ ತಾಲೂಕು ಆಶಾ ಮೇಲ್ವಿಚಾರಕಿ ಸುಜಾತ ಇವರನ್ನೊಳಗೊಂಡ ತಂಡ ಭೇಟಿ ನೀಡಿ, ಡೆಂಗ್ಯೂ ಖಾಯಿಲೆ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಲಾರ್ವಾ ಪ್ರಾತ್ಯಕ್ಷಿಕೆಯನ್ನು ಡೆಂಗ್ಯೂ ಭಾದಿತ ಮನೆಗಳ ಸದಸ್ಯರಿಗೆ ತೋರಿಸಿ ಅರಿವು ಮೂಡಿಸಲಾಯಿತು.

Advertisement

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

5 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

6 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

1 day ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago

ಹವಾಮಾನ ವರದಿ | 09-08-2025 | ಬಂಗಾಳಕೊಲ್ಲಿಯ ವಾಯುಭಾರ ಕುಸಿತ- ಮುಂಗಾರು ಚುರುಕು |

ತಮಿಳುನಾಡು ಕರಾವಳಿ ಸಮೀಪ ಉಂಟಾಗಿರುವ ವಾಯುಭಾರ ಕುಸಿತವು ಆಂದ್ರಾ ಕರಾವಳಿ ದಾಟಿ ಉತ್ತರಕ್ಕೆ…

2 days ago

ಹೊಸರುಚಿ | ಹಲಸಿನ ಹಣ್ಣಿನ ಹಲ್ವ

ಹಲಸಿನ ಹಣ್ಣಿನ ಹಲ್ವಕ್ಕೆ ಬೇಕಾಗುವ ಸಾಮಗ್ರಿಗಳು :  ಹಲಸಿನ ಹಣ್ಣು 1 ಕಪ್. ಜಾರ್…

2 days ago