ಮಳೆಗಾಲ ಆರಂಭವಾಗಿದೆ. ಈಗ ಕೊರೊನಾ ವೈರಸ್ ನಡುವೆಯೇ ಡೆಂಗ್ಯೂ ಭೀತಿ ಹಲವು ಕಡೆ ಇದೆ. ಹೀಗಾಗಿ ಈಗ ಕೊರೊನಾ ಜೊತೆಗೆ ಡೆಂಗ್ಯೂ ತಡೆಯುವ ಅಬಿಯಾನವೂ ಜೊತೆ ಜೊತೆಗೇ ನಡೆಯಬೇಕಿದೆ. ಗ್ರಾಮದಿಂದ ತೊಡಗಿ ನಗರದವರೆಗೆ ಈಗ ಡೆಂಗ್ಯೂ ಜ್ವರದ ಬಗ್ಗೆ ಕಟ್ಟೆಚ್ಚರ ಬೇಕಿದೆ.
ಮಳೆಗಾಲದ ಆರಂಭದಲ್ಲಿ ಪ್ರತೀ ವರ್ಷವೂ ಡೆಂಗ್ಯೂ ಜ್ವರ ವಿಪರೀತವಾಗಿ ಬಾಧಿಸುತ್ತದೆ. ಕಳೆದ ಎರಡು ವರ್ಷಗಳಿಂದ ದ ಕ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದೆ. ಕಳೆದ ವರ್ಷವಂತೂ ಇಡೀ ಜಿಲ್ಲೆಯೇ ಡೆಂಗ್ಯೂ ಜ್ವರದಿಂದ ತತ್ತರಿಸಿತ್ತು. ಹೀಗಾಗಿ ಈ ಬಾರಿ ಕಟ್ಟೆಚ್ಚರ ಬೇಕಿದೆ. ಜ್ವರದ ಲಕ್ಷಣಗಳು ಇದ್ದರೆ ತಕ್ಷಣವೇ ಸೂಕ್ತ ತಪಾಸಣೆ, ಚಿಕಿತ್ಸೆ ಅಗತ್ಯವಾಗಿದೆ. ಈಗಾಗಲೇ ಅಲ್ಲಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜಾಗೃತಿ ಕೂಡಾ ನಡೆಯುತ್ತಿದೆ.
ಆರೋಗ್ಯ ಇಲಾಖೆಗೆ ಈ ಬಾರಿ ಸವಾಲಿನ ಕೆಲಸ ಇದೆ. ಒಂದು ಕಡೆ ಕೊರೊನಾ ವೈರಸ್ , ಇನ್ನೊಂದು ಕಡೆ ಡೆಂಗ್ಯೂ ಹರಡುವ ಭೀತಿ. ಹೀಗಾಗಿ ಇಲಾಖೆಯ ಜೊತೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಡೆಂಗ್ಯೂ ಹರಡದಂತೆ, ಬಾರದಂತೆ ಎಚ್ಚರಿಕೆ ವಹಿಸಬೇಕಿದೆ.
ಶಾಂತಿಗೋಡು ಪರಿಸರದ ವ್ಯಾಪ್ತಿಯಲ್ಲಿ ಕಲ್ಲುಕೋಟೆ ಮತ್ತು ಪಣಂಬು ಎಂಬಲ್ಲಿ ಸಂಶಯಾಸ್ಪದ ಡೆಂಗ್ಯೂ ಪ್ರದೇಶಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಇವರೊಂದಿಗೆ ತಾಲೂಕು ನೋಡಲ್ ಅಧಿಕಾರಿ ಡಾ. ಬದ್ರುದಿನ್ ಎಂ. ಎನ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮಿತಾ ನಾಯಕ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆ ತಾಲೂಕು ಆಶಾ ಮೇಲ್ವಿಚಾರಕಿ ಸುಜಾತ ಇವರನ್ನೊಳಗೊಂಡ ತಂಡ ಭೇಟಿ ನೀಡಿ, ಡೆಂಗ್ಯೂ ಖಾಯಿಲೆ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಲಾರ್ವಾ ಪ್ರಾತ್ಯಕ್ಷಿಕೆಯನ್ನು ಡೆಂಗ್ಯೂ ಭಾದಿತ ಮನೆಗಳ ಸದಸ್ಯರಿಗೆ ತೋರಿಸಿ ಅರಿವು ಮೂಡಿಸಲಾಯಿತು.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…