Advertisement
ಸುದ್ದಿಗಳು

ಡೆಂಗ್ಯೂ ಜಾಗೃತಿ| ಮಳೆ ಶುರುವಾಯ್ತು- ತಡೆಯಿರಿ ಡೆಂಗ್ಯೂ | ಇಲಾಖೆಗಳಿಂದ ಜಾಗೃತಿ ಅಭಿಯಾನ ಆರಂಭ

Share

ಮಳೆಗಾಲ ಆರಂಭವಾಗಿದೆ. ಈಗ ಕೊರೊನಾ ವೈರಸ್ ನಡುವೆಯೇ ಡೆಂಗ್ಯೂ ಭೀತಿ ಹಲವು ಕಡೆ ಇದೆ. ಹೀಗಾಗಿ ಈಗ ಕೊರೊನಾ ಜೊತೆಗೆ ಡೆಂಗ್ಯೂ ತಡೆಯುವ ಅಬಿಯಾನವೂ ಜೊತೆ ಜೊತೆಗೇ ನಡೆಯಬೇಕಿದೆ. ಗ್ರಾಮದಿಂದ ತೊಡಗಿ ನಗರದವರೆಗೆ ಈಗ ಡೆಂಗ್ಯೂ ಜ್ವರದ ಬಗ್ಗೆ ಕಟ್ಟೆಚ್ಚರ ಬೇಕಿದೆ.


ಮಳೆಗಾಲದ ಆರಂಭದಲ್ಲಿ ಪ್ರತೀ ವರ್ಷವೂ ಡೆಂಗ್ಯೂ ಜ್ವರ ವಿಪರೀತವಾಗಿ ಬಾಧಿಸುತ್ತದೆ. ಕಳೆದ ಎರಡು ವರ್ಷಗಳಿಂದ ದ ಕ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದೆ. ಕಳೆದ ವರ್ಷವಂತೂ ಇಡೀ ಜಿಲ್ಲೆಯೇ ಡೆಂಗ್ಯೂ ಜ್ವರದಿಂದ ತತ್ತರಿಸಿತ್ತು. ಹೀಗಾಗಿ ಈ ಬಾರಿ ಕಟ್ಟೆಚ್ಚರ ಬೇಕಿದೆ. ಜ್ವರದ ಲಕ್ಷಣಗಳು ಇದ್ದರೆ ತಕ್ಷಣವೇ ಸೂಕ್ತ ತಪಾಸಣೆ, ಚಿಕಿತ್ಸೆ ಅಗತ್ಯವಾಗಿದೆ. ಈಗಾಗಲೇ ಅಲ್ಲಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ  ಜಾಗೃತಿ ಕೂಡಾ ನಡೆಯುತ್ತಿದೆ.

ಆರೋಗ್ಯ ಇಲಾಖೆಗೆ ಈ ಬಾರಿ ಸವಾಲಿನ ಕೆಲಸ ಇದೆ. ಒಂದು ಕಡೆ ಕೊರೊನಾ ವೈರಸ್ , ಇನ್ನೊಂದು ಕಡೆ ಡೆಂಗ್ಯೂ ಹರಡುವ ಭೀತಿ. ಹೀಗಾಗಿ ಇಲಾಖೆಯ ಜೊತೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಡೆಂಗ್ಯೂ ಹರಡದಂತೆ, ಬಾರದಂತೆ ಎಚ್ಚರಿಕೆ ವಹಿಸಬೇಕಿದೆ.

ಶಾಂತಿಗೋಡು ಪರಿಸರದ ವ್ಯಾಪ್ತಿಯಲ್ಲಿ ಕಲ್ಲುಕೋಟೆ ಮತ್ತು ಪಣಂಬು ಎಂಬಲ್ಲಿ ಸಂಶಯಾಸ್ಪದ ಡೆಂಗ್ಯೂ ಪ್ರದೇಶಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಮೀನಾಕ್ಷಿ ಶಾಂತಿಗೋಡು ಇವರೊಂದಿಗೆ ತಾಲೂಕು ನೋಡಲ್ ಅಧಿಕಾರಿ ಡಾ. ಬದ್ರುದಿನ್ ಎಂ. ಎನ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮಿತಾ ನಾಯಕ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆ ತಾಲೂಕು ಆಶಾ ಮೇಲ್ವಿಚಾರಕಿ ಸುಜಾತ ಇವರನ್ನೊಳಗೊಂಡ ತಂಡ ಭೇಟಿ ನೀಡಿ, ಡೆಂಗ್ಯೂ ಖಾಯಿಲೆ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಲಾರ್ವಾ ಪ್ರಾತ್ಯಕ್ಷಿಕೆಯನ್ನು ಡೆಂಗ್ಯೂ ಭಾದಿತ ಮನೆಗಳ ಸದಸ್ಯರಿಗೆ ತೋರಿಸಿ ಅರಿವು ಮೂಡಿಸಲಾಯಿತು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

16 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

1 day ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

1 day ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

1 day ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago