Advertisement
ಸುದ್ದಿಗಳು

ಡೆಂಗ್ಯೂ ಜಾಗೃತಿ| ಮಳೆ ಶುರುವಾಯ್ತು- ತಡೆಯಿರಿ ಡೆಂಗ್ಯೂ | ಇಲಾಖೆಗಳಿಂದ ಜಾಗೃತಿ ಅಭಿಯಾನ ಆರಂಭ

Share

ಮಳೆಗಾಲ ಆರಂಭವಾಗಿದೆ. ಈಗ ಕೊರೊನಾ ವೈರಸ್ ನಡುವೆಯೇ ಡೆಂಗ್ಯೂ ಭೀತಿ ಹಲವು ಕಡೆ ಇದೆ. ಹೀಗಾಗಿ ಈಗ ಕೊರೊನಾ ಜೊತೆಗೆ ಡೆಂಗ್ಯೂ ತಡೆಯುವ ಅಬಿಯಾನವೂ ಜೊತೆ ಜೊತೆಗೇ ನಡೆಯಬೇಕಿದೆ. ಗ್ರಾಮದಿಂದ ತೊಡಗಿ ನಗರದವರೆಗೆ ಈಗ ಡೆಂಗ್ಯೂ ಜ್ವರದ ಬಗ್ಗೆ ಕಟ್ಟೆಚ್ಚರ ಬೇಕಿದೆ.


ಮಳೆಗಾಲದ ಆರಂಭದಲ್ಲಿ ಪ್ರತೀ ವರ್ಷವೂ ಡೆಂಗ್ಯೂ ಜ್ವರ ವಿಪರೀತವಾಗಿ ಬಾಧಿಸುತ್ತದೆ. ಕಳೆದ ಎರಡು ವರ್ಷಗಳಿಂದ ದ ಕ ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ವ್ಯಾಪಕವಾಗಿದೆ. ಕಳೆದ ವರ್ಷವಂತೂ ಇಡೀ ಜಿಲ್ಲೆಯೇ ಡೆಂಗ್ಯೂ ಜ್ವರದಿಂದ ತತ್ತರಿಸಿತ್ತು. ಹೀಗಾಗಿ ಈ ಬಾರಿ ಕಟ್ಟೆಚ್ಚರ ಬೇಕಿದೆ. ಜ್ವರದ ಲಕ್ಷಣಗಳು ಇದ್ದರೆ ತಕ್ಷಣವೇ ಸೂಕ್ತ ತಪಾಸಣೆ, ಚಿಕಿತ್ಸೆ ಅಗತ್ಯವಾಗಿದೆ. ಈಗಾಗಲೇ ಅಲ್ಲಲ್ಲಿ ಡೆಂಗ್ಯೂ ಜ್ವರ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ  ಜಾಗೃತಿ ಕೂಡಾ ನಡೆಯುತ್ತಿದೆ.

ಆರೋಗ್ಯ ಇಲಾಖೆಗೆ ಈ ಬಾರಿ ಸವಾಲಿನ ಕೆಲಸ ಇದೆ. ಒಂದು ಕಡೆ ಕೊರೊನಾ ವೈರಸ್ , ಇನ್ನೊಂದು ಕಡೆ ಡೆಂಗ್ಯೂ ಹರಡುವ ಭೀತಿ. ಹೀಗಾಗಿ ಇಲಾಖೆಯ ಜೊತೆ ಸಾರ್ವಜನಿಕರ ಸಹಕಾರ ಅಗತ್ಯವಿದೆ. ಡೆಂಗ್ಯೂ ಹರಡದಂತೆ, ಬಾರದಂತೆ ಎಚ್ಚರಿಕೆ ವಹಿಸಬೇಕಿದೆ.

ಶಾಂತಿಗೋಡು ಪರಿಸರದ ವ್ಯಾಪ್ತಿಯಲ್ಲಿ ಕಲ್ಲುಕೋಟೆ ಮತ್ತು ಪಣಂಬು ಎಂಬಲ್ಲಿ ಸಂಶಯಾಸ್ಪದ ಡೆಂಗ್ಯೂ ಪ್ರದೇಶಕ್ಕೆ ಜಿಲ್ಲಾ ಪಂಚಾಯತ್ ಅಧ್ಯಕ್ಷೆ  ಮೀನಾಕ್ಷಿ ಶಾಂತಿಗೋಡು ಇವರೊಂದಿಗೆ ತಾಲೂಕು ನೋಡಲ್ ಅಧಿಕಾರಿ ಡಾ. ಬದ್ರುದಿನ್ ಎಂ. ಎನ್, ತಾಲೂಕು ಆರೋಗ್ಯಾಧಿಕಾರಿ ಡಾ ಅಶೋಕ್ ಕುಮಾರ್ ರೈ, ಸರ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ನಮಿತಾ ನಾಯಕ್ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರು ಮತ್ತು ಆಶಾ ಕಾರ್ಯಕರ್ತೆ ತಾಲೂಕು ಆಶಾ ಮೇಲ್ವಿಚಾರಕಿ ಸುಜಾತ ಇವರನ್ನೊಳಗೊಂಡ ತಂಡ ಭೇಟಿ ನೀಡಿ, ಡೆಂಗ್ಯೂ ಖಾಯಿಲೆ ಬಗ್ಗೆ ಆರೋಗ್ಯ ಶಿಕ್ಷಣ ನೀಡುವುದರ ಜೊತೆಗೆ ಲಾರ್ವಾ ಪ್ರಾತ್ಯಕ್ಷಿಕೆಯನ್ನು ಡೆಂಗ್ಯೂ ಭಾದಿತ ಮನೆಗಳ ಸದಸ್ಯರಿಗೆ ತೋರಿಸಿ ಅರಿವು ಮೂಡಿಸಲಾಯಿತು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

4 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

4 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

21 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

24 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

1 day ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

1 day ago