ಡೆಂಘೆ ಕುರಿತು ಜನಜಾಗೃತಿ ಅಭಿಯಾನಕ್ಕೆ ಚಾಲನೆ

August 14, 2019
10:01 PM

ಸುಳ್ಯ: ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಡೆಂಘೆ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು.

ಅಭಿಯಾನದ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ನಂತರ ಕೊಡಿಯಾಲಬೈಲು ಸ.ಕಿ.ಪ್ರಾ ಶಾಲೆಯಲ್ಲಿ ಡೆಂಘೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿ ಕರಪತ್ರ ಹಂಚಲಾಯಿತು. ಬಳಿಕ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯಲ್ಲಿ ಭೇಟಿ ಕೊಟ್ಟು ಕರ ಪತ್ರ ಹಂಚಲಾಯಿತು.ಜಟ್ಟಿಪಳ್ಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ನೀಡಲಾಗಿದೆ.

ಈ ಸಂಧರ್ಭದಲ್ಲಿ ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಅಧ್ಯಕ್ಷ ನಾಸಿರ್ ಸಿ.ಎ ಸಿ.ಎಫ್ ಸಿ ಸಾಮಾಜಿಕ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೆ.ಎ, ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ , ಇಬ್ಬನಿ ಸುಳ್ಯ, ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಹಾಗೂ ಸಿ.ಎಫ್.ಸಿ ಪಧಾಧಿಕಾರಿಗಳಾದ ಸತ್ಯನಾರಾಯಣ, ಫವಾಝ್ ಎನ್ ಎ , ಹಜರತ್ ಖಲೀಲ್, ರಿಯಾಜ್ ಸಿ.ಎ, ಅಲ್ತಾಫ್ ಜಟ್ಟಿಪಳ್ಳ, ಶಾನವಾಸ್ ಶೇಖ್ ಜ್ಯೋತಿ, ನಾಸಿರ್ ಪೈಚಾರ್ ಮುಂತಾದವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?
March 29, 2026
2:48 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!
March 28, 2026
2:03 PM
by: ಸಾಯಿಶೇಖರ್ ಕರಿಕಳ
ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!
March 28, 2026
11:07 AM
by: ಮಿರರ್‌ ಡೆಸ್ಕ್
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ
March 28, 2026
7:38 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror