ಡೆಂಘೆ ಕುರಿತು ಜನಜಾಗೃತಿ ಅಭಿಯಾನಕ್ಕೆ ಚಾಲನೆ

August 14, 2019
10:01 PM

ಸುಳ್ಯ: ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಡೆಂಘೆ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು.

ಅಭಿಯಾನದ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ನಂತರ ಕೊಡಿಯಾಲಬೈಲು ಸ.ಕಿ.ಪ್ರಾ ಶಾಲೆಯಲ್ಲಿ ಡೆಂಘೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿ ಕರಪತ್ರ ಹಂಚಲಾಯಿತು. ಬಳಿಕ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯಲ್ಲಿ ಭೇಟಿ ಕೊಟ್ಟು ಕರ ಪತ್ರ ಹಂಚಲಾಯಿತು.ಜಟ್ಟಿಪಳ್ಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ನೀಡಲಾಗಿದೆ.

ಈ ಸಂಧರ್ಭದಲ್ಲಿ ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಅಧ್ಯಕ್ಷ ನಾಸಿರ್ ಸಿ.ಎ ಸಿ.ಎಫ್ ಸಿ ಸಾಮಾಜಿಕ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೆ.ಎ, ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ , ಇಬ್ಬನಿ ಸುಳ್ಯ, ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಹಾಗೂ ಸಿ.ಎಫ್.ಸಿ ಪಧಾಧಿಕಾರಿಗಳಾದ ಸತ್ಯನಾರಾಯಣ, ಫವಾಝ್ ಎನ್ ಎ , ಹಜರತ್ ಖಲೀಲ್, ರಿಯಾಜ್ ಸಿ.ಎ, ಅಲ್ತಾಫ್ ಜಟ್ಟಿಪಳ್ಳ, ಶಾನವಾಸ್ ಶೇಖ್ ಜ್ಯೋತಿ, ನಾಸಿರ್ ಪೈಚಾರ್ ಮುಂತಾದವರು ಉಪಸ್ಥಿತರಿದ್ದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು
April 29, 2026
10:45 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ
April 29, 2026
10:05 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ
April 28, 2026
2:11 PM
by: ಸಾಯಿಶೇಖರ್ ಕರಿಕಳ
ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ
April 27, 2026
9:34 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror