ಸುಳ್ಯ: ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಡೆಂಘೆ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು.
ಅಭಿಯಾನದ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ನಂತರ ಕೊಡಿಯಾಲಬೈಲು ಸ.ಕಿ.ಪ್ರಾ ಶಾಲೆಯಲ್ಲಿ ಡೆಂಘೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿ ಕರಪತ್ರ ಹಂಚಲಾಯಿತು. ಬಳಿಕ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯಲ್ಲಿ ಭೇಟಿ ಕೊಟ್ಟು ಕರ ಪತ್ರ ಹಂಚಲಾಯಿತು.ಜಟ್ಟಿಪಳ್ಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ನೀಡಲಾಗಿದೆ.
ಈ ಸಂಧರ್ಭದಲ್ಲಿ ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಅಧ್ಯಕ್ಷ ನಾಸಿರ್ ಸಿ.ಎ ಸಿ.ಎಫ್ ಸಿ ಸಾಮಾಜಿಕ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೆ.ಎ, ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ , ಇಬ್ಬನಿ ಸುಳ್ಯ, ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಹಾಗೂ ಸಿ.ಎಫ್.ಸಿ ಪಧಾಧಿಕಾರಿಗಳಾದ ಸತ್ಯನಾರಾಯಣ, ಫವಾಝ್ ಎನ್ ಎ , ಹಜರತ್ ಖಲೀಲ್, ರಿಯಾಜ್ ಸಿ.ಎ, ಅಲ್ತಾಫ್ ಜಟ್ಟಿಪಳ್ಳ, ಶಾನವಾಸ್ ಶೇಖ್ ಜ್ಯೋತಿ, ನಾಸಿರ್ ಪೈಚಾರ್ ಮುಂತಾದವರು ಉಪಸ್ಥಿತರಿದ್ದರು.
ಬ್ರೇಡ್ ಪಿಜ್ಜಾಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಬ್ರೇಡ್ ಪೀಸ್…
ಡಾ. ವಿಘ್ನೇಶ್ವರ ವರ್ಮುಡಿ ಅವರು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಕಟಿಸಿದ್ದ ಲೇಖನಗಳನ್ನು ವಿಶ್ವದ ಬೇರೆ…
ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು ಸ್ವಭಾಷಾ ಚಾತುರ್ಮಾಸ್ಯ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ದೇಶದಲ್ಲಿ ರಬ್ಬರ್ ಉತ್ಪಾದನೆ ಹೆಚ್ಚಳದ ನಡುವೆ ಇದೀಗ ರಬ್ಬರ್ ಆಮದು ನೀತಿಯು ರಬ್ಬರ್…
ಅಕ್ರಮವಾಗಿ ಅಡಿಕೆ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ನಕ್ಸಲ್ಬರಿ…