ಸುಳ್ಯ: ಇಬ್ಬನಿ ಸುಳ್ಯ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಇದರ ಜಂಟಿ ಆಶ್ರಯದಲ್ಲಿ ನಡೆಯುತ್ತಿರುವ ಡೆಂಘೆ ಹಾಗೂ ಚಿಕುನ್ ಗುನ್ಯಾ ಖಾಯಿಲೆ ಬಗ್ಗೆ ಜನಜಾಗೃತಿ ಅಭಿಯಾನಕ್ಕೆ ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್ ಚಾಲನೆ ನೀಡಿದರು.
ಅಭಿಯಾನದ ಭಾಗವಾಗಿ ಕೊಡಿಯಾಲಬೈಲು ಕಾಲನಿಗೆ ಭೇಟಿ ನೀಡಿ ಮನೆ ಮನೆಗಳಿಗೆ ಕರಪತ್ರ ವಿತರಿಸಿ ಮಾಹಿತಿ ನೀಡಲಾಯಿತು. ನಂತರ ಕೊಡಿಯಾಲಬೈಲು ಸ.ಕಿ.ಪ್ರಾ ಶಾಲೆಯಲ್ಲಿ ಡೆಂಘೆ ತಡೆಗಟ್ಟುವ ಬಗ್ಗೆ ಪ್ರಾತ್ಯಕ್ಷತೆ ತೋರಿಸಿ ಕರಪತ್ರ ಹಂಚಲಾಯಿತು. ಬಳಿಕ ಕೊಡಿಯಾಲಬೈಲು ಮಹಾತ್ಮಾ ಗಾಂಧಿ ಮಲ್ನಾಡ್ ಪ್ರೌಢ ಶಾಲೆಯಲ್ಲಿ ಭೇಟಿ ಕೊಟ್ಟು ಕರ ಪತ್ರ ಹಂಚಲಾಯಿತು.ಜಟ್ಟಿಪಳ್ಳದಲ್ಲಿ ಸಾರ್ವಜನಿಕರಿಗೆ ಮಾಹಿತಿ ಕರಪತ್ರ ನೀಡಲಾಗಿದೆ.
ಈ ಸಂಧರ್ಭದಲ್ಲಿ ಇಬ್ಬನಿ ಅಧ್ಯಕ್ಷ ಖಾದರ್ ಜಟ್ಟಿಪಳ್ಳ, ಇಬ್ಬನಿಯ ಮಾರ್ಗದರ್ಶಕ ರಶೀದ್ ಜಟ್ಟಿಪಳ್ಳ, ಸಿಟಿ ಫ್ರೆಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಅಧ್ಯಕ್ಷ ನಾಸಿರ್ ಸಿ.ಎ ಸಿ.ಎಫ್ ಸಿ ಸಾಮಾಜಿಕ ಕಾರ್ಯದರ್ಶಿ ಅಬ್ದುಲ್ ರಹ್ಮಾನ್ ಕೆ.ಎ, ಸಂಘಟನಾ ಕಾರ್ಯದರ್ಶಿ ಶಿಹಾಬ್ ಜೆ.ಎಂ , ಇಬ್ಬನಿ ಸುಳ್ಯ, ಸಜ್ಜನ ಪ್ರತಿಷ್ಠಾನ ಬೀಜದ ಕಟ್ಟೆ ಹಾಗೂ ಸಿ.ಎಫ್.ಸಿ ಪಧಾಧಿಕಾರಿಗಳಾದ ಸತ್ಯನಾರಾಯಣ, ಫವಾಝ್ ಎನ್ ಎ , ಹಜರತ್ ಖಲೀಲ್, ರಿಯಾಜ್ ಸಿ.ಎ, ಅಲ್ತಾಫ್ ಜಟ್ಟಿಪಳ್ಳ, ಶಾನವಾಸ್ ಶೇಖ್ ಜ್ಯೋತಿ, ನಾಸಿರ್ ಪೈಚಾರ್ ಮುಂತಾದವರು ಉಪಸ್ಥಿತರಿದ್ದರು.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…