Advertisement
ಅನುಕ್ರಮ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
ಡಾ.ಆದಿತ್ಯ ಚಣಿಲ BHMS(Intern)

 

 

 

 

 

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

4 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

4 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

13 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

14 hours ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಗಿನಿಂದಲೇ ಮಳೆ- ಸಂಜೆ ಗುಡುಗು ಸಹಿತ ಭರ್ಜರಿ ಮಳೆ

ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…

19 hours ago

ಹವಾಮಾನ ವರದಿ | 16-05-2026 | ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು – ಮೇ 20 ರಿಂದ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…

21 hours ago