Advertisement
ಅನುಕ್ರಮ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
ಡಾ.ಆದಿತ್ಯ ಚಣಿಲ BHMS(Intern)

 

 

 

 

 

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

18 hours ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

1 day ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

1 day ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

1 day ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

1 day ago