Advertisement
ಅನುಕ್ರಮ

ಡೆಂಘೆ ಜ್ವರ ಬಂದರೆ ಏನು ಮಾಡಬಹುದು ?

Share
ಡಾ.ಆದಿತ್ಯ ಚಣಿಲ BHMS(Intern)

 

 

 

 

 

ಡೆಂಘೆ…! ಹೆಸರು ಕೇಳಿದಾಗಲೇ ದಂಗಾಗುವ ಮಂದಿ ಹಲವಾರು.

ಹಾಗಿದ್ದರೆ ಏನಿದು ಡೆಂಘೆ ಜ್ವರ ?. ಸರಳವಾಗಿ ಹೇಳುವುದಾದರೆ ಇಂದೊಂದು ಸೋಂಕು ರೋಗ . ಈಡೀಸ್ ಎಂಬ ಸೋಂಕು ಪೀಡಿತ ಸೊಳ್ಳೆ ಮನುಷ್ಯನಿಗೆ ಕಚ್ಚಿದಾಗ ಇದು ಹರಡುತ್ತದೆ . ಈ ಸೊಳ್ಳೆಯ ಜೀವಾವಧಿ 2 ವಾರ ಮಾತ್ರ . ಇದು ಹೆಚ್ಚಾಗಿ ಮಳೆಗಾಲದಲ್ಲಿ ಕಂಡುಬರುತ್ತದೆ.  ಮುಖ್ಯವಾಗಿ ನೀರಿನಲ್ಲಿ ಕೊಳಚೆ ಅಥವಾ ಶೇಖರಣೆಯಾದ ನೀರಿನಲ್ಲಿ ತನ್ನ ಸಂತಾನೋತ್ಪತ್ತಿ ಮಾಡುತ್ತದೆ .

ಹೇಗೆ ಹರಡುವುದು?: ಇದು ಈ ರೋಗ ಸೋಂಕಿತ ವ್ಯಕ್ತಿಯ ರಕ್ತವನ್ನು ಆಹಾರಕ್ಕಾಗಿ ಕಚ್ಚಿದಾಗ ತನಗೆ ಹರಡುತ್ತದೆ ಇದು ಯಾರಿಗೆಲ್ಲ ಕಚ್ಚುತ್ತದೋ ಅವರಿಗೆಲ್ಲ ಈ ರೋಗ ಹರಡುತ್ತದೆ.
ಇದನ್ನ ತಡೆಯೋದು ಹೇಗೆ ಎಂಬ ಪ್ರಶ್ನೆಗೆ, ಸೊಳ್ಳೆ ಕಚ್ಚದಂತೆ ತಡೆಯುವುದೇ ತಡೆಯುವ ಮೊದಲ ಸೂತ್ರ. ಇದಕ್ಕಾಗಿ   ಪೂರ್ತಿ ತೋಳಿರುವ ಉಡುಪು ಧರಿಸುವುದು
ಸೊಳ್ಳೆ ಪರದೆ, ನೀರು ಶೇಖರಣೆಯಾಗದಂತೆ ನೋಡಿಕೊಳ್ಳುವುದು , ಸೊಳ್ಳೆ ಬತ್ತಿಯ ಬಳಕೆ ಇತ್ಯಾದಿಗಳೇ ಮೊದಲ ರಕ್ಷಣೆ.

ಡೆಂಘೆ ಲಕ್ಷಣಗಳು ಏನು ?

2-7 ದಿನಗಳು ಜ್ವರ , ತಲೆನೋವು , ಕಣ್ಣು ಗುಡ್ಡೆ ನೋವು, ಮೈಕೈ ನೋವು, ಕೆಂಪಾದ ಚರ್ಮ , ಸುಸ್ತಾಗುವುದು ಮೊದಲ ಲಕ್ಷಣ.

ಡೆಂಘೆ ಕಂಡುಬಂದಲ್ಲಿ ಏನು ಮಾಡಬೇಕು?:

ಮೊದಲ ಸೂತ್ರ ವಿಶ್ರಾಂತಿ. ವೈದ್ಯರ ಸಲಹೆ ಅಥವಾ ಭೇಟಿಯಾಗುವುದು.

 

ಚಿಕಿತ್ಸೆ ಬಳಿಕ ನಾವು ಏನೆಲ್ಲಾ ಮಾಡಬಹುದು ?:

1.ಪಪ್ಪಾಯಿ ಎಲೆ ಮದ್ದು : ಪಪ್ಪಾಯಿ ಎಲೆ ತೊಳೆದು ಅದರ ಸ್ವಲ್ಪ ರಸವನ್ನು ಹಿಂಡಿ ಅರ್ಧ ಗ್ಲಾಸ್ ನೀರಿನೊಡನೆ ಸೇರಿಸಿ ಕುಡಿಯಿರಿ ಇದು ನಿಮ್ಮ ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ ಮತ್ತು ಪ್ಲೇಟ್ಲೆಟ್ ಅಂಶವನ್ನು ಹೆಚ್ಚು ಮಾಡುತ್ತದೆ ( ಮಿತಿಗಿಂತ ಜಾಸ್ತಿ ಪಪ್ಪಾಯಿ ಎಲೆಯ ರಸ ಕುಡಿಯಬಾರದು)

2 ಅರಸಿನ,  ಕಾಳುಮೆಣಸು ಗಳನ್ನು ಬಿಸಿ ಹಾಲಿಗೆ ಇದನ್ನು ಮಿಶ್ರಮಾಡಿ ಕುಡಿಯುವುದು . ಅರಸಿನ- ಬೆಲ್ಲ ತಿಂದರೂ ಉತ್ತಮ

3.ತುಳಸಿ-ಕಾಳುಮೆಣಸು (ತುಳಸಿ-ಕಾಳುಮೆಣಸು ನೀರಲ್ಲಿ ಬೆರೆಸಿ ಕುಡಿಯುವುದು)

4.ದಾಳಿಂಬೆ-ಪಪ್ಪಾಯಿ ತಿನ್ನುವುದು

5.ಬೀಟ್ರೋಟ್- ನಿಂಬೆ ರಸ

ಈ ಸೂತ್ರಗಳು ಮೈ ಕೈ ನೋವನ್ನು ದೂರಗೊಳಿಸುತ್ತದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬಾಳ ಮಧ್ಯಾಹ್ನದ ಲಹರಿ

"ಜೀವನ ಎಷ್ಟು ದೀರ್ಘ ಎಂಬುದಲ್ಲ, ಅದು ಎಷ್ಟು ಅರ್ಥಪೂರ್ಣ ಎಂಬುದೇ ನಿಜವಾದ ಲೆಕ್ಕ.…

27 minutes ago

ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ

ಜುಲೈ 8ರಿಂದ ರಾಜ್ಯದಲ್ಲಿ ಮಳೆಯ ಪ್ರಮಾಣ ತೀವ್ರವಾಗಿ ಕುಸಿಯುವ ಸಾಧ್ಯತೆ ಇದೆ. ಕರಾವಳಿ…

1 hour ago

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

4 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

5 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

8 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

17 hours ago