ಸುದ್ದಿಗಳು

ಡೆಂಘೆ-ಮಲೇರಿಯಾ ವಿರುದ್ದ ಜನಜಾಗೃತಿ “ಡ್ರೈವ್ ಡೇ ಅಭಿಯಾನ”

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ : ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ಳಾರೆ, ಗ್ರಾಮ ಪಂಚಾಯತ್ ಬೆಳ್ಳಾರೆ, ಜೆಸಿಐ ಬೆಳ್ಳಾರೆ ಹಾಗೂ ರೋಟರಿ ಕ್ಲಬ್ ಬೆಳ್ಳಾರೆ ಟೌನ್ ಇವುಗಳ ಸಹಭಾಗಿತ್ವದಲ್ಲಿ ಡೆಂಘೆ, ಮಲೇರಿಯಾ ವಿರುದ್ಧ ಸಾರ್ವಜನಿಕರಿಗೆ ಅರಿವು ನೀಡುವ ಹಾಗೂ ‘ಡ್ರೈವ್ ಡೇ’ ವಿಶೇಷ ಅಭಿಯಾನ ಕಾರ್ಯಕ್ರಮವು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಜರಗಿತು.

Advertisement

ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಅಶ್ವತೀ ಮಾತನಾಡಿ ಡೆಂಘೆ , ಮಲೇರಿಯಾ ಇನ್ನಿತರ ಮಾರಕ ಕಾಯಿಲೆಗಳು ಹರಡದಂತೆ ಪ್ರತಿ ಮನೆ, ಅಂಗಡಿ ಹಾಗೂ ನಿರ್ಮಾಣ ಹಂತದ ಕಟ್ಟಡಗಳಲ್ಲಿ ನೀರು ಶೇಖರಣೆಗೊಳ್ಳದಂತೆ ಜಾಗೃತಿ ವಹಿಸುವಂತೆ ಮನವಿ ಮಾಡಿದರು. ಇಂತಹ ಪ್ರದೇಶದಲ್ಲಿ ಲಾರ್ವಗಳು ಉತ್ಪತ್ತಿಗೊಂಡು ಕಾಯಿಲೆಗಳು ಹಬ್ಬಲು ಸಹಕಾರಿಯಾಗುತ್ತದೆ. ಇದಕ್ಕೆ ಪರಿಹಾರ ಎಂಬಂತೆ, ಸ್ವಚ್ಛತೆ ಕಾಯ್ದುಗೊಳ್ಳುವುದು ಎಂದರಲ್ಲದೆ, ಜ್ವರಭಾದೆ ಕಾಣಿಸಿಕೊಂಡಲ್ಲಿ ವಿಳಂಬ ಮಾಡದೆ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದುಕೊಳ್ಳಿ ಎಂದು ನುಡಿದರು.

ಸಭಾಧ್ಯಕ್ಷತೆ ವಹಿಸಿ, ಸ್ವಾಗತಿಸಿದ ರೋಟರಿ ಕ್ಲಬ್ ಬೆಳ್ಳಾರೆ ಟೌನ್‍ನ ಅಧ್ಯಕ್ಷ ಬಿ. ನರಸಿಂಹ ಜೋಶಿ ಮಾತನಾಡಿ ದೇಶದಲ್ಲಿ ಪೋಲಿಯೋ ನಿರ್ಮೂಲನೆಗೊಳಿಸಿದಂತೆ ಡೆಂಘೆ ಇನ್ನಿತರ ಮಾರಕ ಕಾಯಿಲೆಯ ವಿರುದ್ಧ ಜನಜಾಗೃತಿ ಮೂಡಿಸಿಕೊಂಡು ಕಾರ್ಯಚರಣೆ ನಡೆಸಿ, ಕಾಯಿಲೆ ಹಬ್ಬದಂತೆ ತಡೆಯಬೇಕು ಎಂದು ಹೇಳಿದರು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಬೆಳ್ಳಾರೆಯ ಉಪಾಧ್ಯಕ್ಷ ಮಹಮ್ಮದ್ ಮುಸ್ತಾಫ, ಬೆಳ್ಳಾರೆ ಜೆ.ಸಿ.ಐ.ಯ ಅಧ್ಯಕ್ಷ ಲೋಕೇಶ್ ತಂಟೆಪ್ಪಾಡಿ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಬೆಳ್ಳಾರೆ ಪೇಟೆಯ ಬಸ್‍ಸ್ಟಾಂಡ್ ಬಳಿ ತೆರಳಿ ಸೊಳ್ಳೆಗಳು ಹರಡದಂತೆ ಪರಿಸರ ಸ್ವಚ್ಛತೆ, ನೀರು ಶೇಖರಣೆಗೊಳ್ಳದಂತೆ ಕ್ರಮ ಕೈಗೊಳ್ಳುವಂತೆ ಅಂಗಡಿ ವ್ಯವಹಾರಸ್ಥರಿಗೆ, ಪ್ರಯಾಣಿಕರಿಗೆ ಅರಿವು ನೀಡಿದರು.

Advertisement

ಈ ಕಾರ್ಯಾಚರಣೆಯಲ್ಲಿ ರೋಟರಿಯ ಝೋನಲ್ ಲೆಪ್ಟಿನೆಂಟ್ ಪ್ರಭಾಕರ ಆಳ್ವ ಬಜನಿಗುತ್ತು ಸ್ಥಾಪಕಾಧ್ಯಕ್ಷ ಶ್ಯಾಮಸುಂದರ ರೈ, ರವೀಂದ್ರ ಗೌಡ ಯಂ., ವೆಂಕಪ್ಪ ಗೌಡ ಎನ್. ಎಸ್., ಐತ್ತಪ್ಪ ಗೌಡ ಕಾವಿನಮೂಲೆ, ಸೀತಾರಾಮ ನೆಟ್ಟಾರು, ಆಸ್ಪತ್ರೆಯ ಸಿಬ್ಬಂದಿಗಳು, ಆಶಾಕಾರ್ಯಕರ್ತೆಯರು ಭಾಗವಹಿಸಿ ಸ್ವಚ್ಛತೆ ಬಗ್ಗೆ ಮಾಹಿತಿ ನೀಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!

ಒಂದು ಹಸುವಿನ ಸಗಣಿಯಿಂದ ಪ್ರತಿ ವರ್ಷ 225 ಲೀಟರ್ ಪೆಟ್ರೋಲ್‌ಗೆ ಸಮಾನವಾದ ಮೀಥೇನ್…

3 hours ago

ಬಾಗಿಲು ಇಲ್ಲದ ಮನೆಯಂತಾದ ಕನ್ನಡ ಸ್ಥಿತಿ : ರಾಘವೇಶ್ವರ ಶ್ರೀ

ಕನ್ನಡದ ಸ್ಥಿತಿ ಇಂದು ಬೇಲಿ ಇಲ್ಲದ ತೋಟದಂತೆ, ಬಾಗಿಲಿಲ್ಲದ ಮನೆಯಂತಾಗಿದ್ದು, ನಾಲಿಗೆ ಶುದ್ಧೀಕರಣ,…

3 hours ago

ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌

ಮಿಜೋರಾಂನ ಚಾಂಫೈನಲ್ಲಿ ಅಸ್ಸಾಂ ರೈಫಲ್ಸ್ 466 ಚೀಲ ಅಡಿಕೆಯನ್ನು ವಶಕ್ಕೆ ಪಡೆದಿದೆ. ಈ…

11 hours ago

ಆ.15 ರಿಂದ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ನಿಷೇಧಿಸಿ ಸರ್ಕಾರ ಆದೇಶ

ಮುಜರಾಯಿ ಇಲಾಖೆಯ ವ್ಯಾಪ್ತಿಯಲ್ಲಿ ಇರುವ ದೇವಾಲಯಗಳಲ್ಲಿ ಕಡ್ಡಾಯವಾಗಿ ನೀರಿನ ಬಾಟಲ್ ಸೇರಿದಂತೆ ಪ್ಲಾಸ್ಟಿಕ್ …

13 hours ago

15 ದಿನಗಳಿಗೊಮ್ಮೆ ಶಾಲೆ, ಅಂಗನವಾಡಿಗಳ ನೀರಿನ ತಪಾಸಣೆ – ಜಿ. ಪಂ ಸಿಇಒ ಸೂಚನೆ

ಪ್ರತಿ 15 ದಿನಗಳಿಗೊಮ್ಮೆ ಶಾಲೆ ಮತ್ತು ಅಂಗನವಾಡಿಗಳ ಕುಡಿಯುವ ನೀರನ್ನು ಪರೀಕ್ಷೆಗೊಳಪಡಿಸಿ  ತಪಾಸಣೆ…

14 hours ago

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

20 hours ago