ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ವಿಶ್ವತಂಬಾಕುರಹಿತ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.
ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಸ್ನಾತಕೋತ್ತರ ದಂತ ವೈದ್ಯಕೀಯ ನಿರ್ದೇಶಕ ಡಾ.ಶರತ್ಕುಮಾರ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
ತಂಬಾಕು ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ, ವೀಡಿಯೋ ಪ್ರದರ್ಶನ ಮತ್ತು ಪ್ರತಿಜ್ಞಾ ಬೋದನೆ ದಿನವಿಡೀ ನಡೆದವು. ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದ ರು.
ಕಾರ್ಯಕ್ರಮದಲ್ಲಿ ಬಾಯಿಯರೋಗ ಪತ್ತೆ ಮತ್ತು ಕ್ಷ-ಕಿರಣ ವಿಭಾಗ ಮುಖ್ಯಸ್ಥ ಡಾ.ಜಯಪ್ರಸಾದ ಆನೆಕಾರ ಸ್ವಾಗತಿಸಿದರು. ಡಾ.ದೀಪಿಕಾ ವಂದನಾರ್ಪಣೆಗೈದರು. ಡಾ.ಜಯಲಕ್ಷ್ಮಿ ಮತ್ತು ಡಾ.ಸೀಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…