ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯದಲ್ಲಿ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ವಿಶ್ವತಂಬಾಕುರಹಿತ ದಿನಾಚರಣೆಯ ಪ್ರಯುಕ್ತ ಹಮ್ಮಿಕೊಳ್ಳಲಾಗಿತ್ತು.
ಕೆ.ವಿ.ಜಿ. ದಂತ ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ.ಮೋಕ್ಷ ನಾಯಕ್ ಕಾರ್ಯಕ್ರಮ ಉದ್ಘಾಟಿಸಿದರು. ಸ್ನಾತಕೋತ್ತರ ದಂತ ವೈದ್ಯಕೀಯ ನಿರ್ದೇಶಕ ಡಾ.ಶರತ್ಕುಮಾರ್ ಶೆಟ್ಟಿ ಅವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.
ತಂಬಾಕು ದುಷ್ಪರಿಣಾಮಗಳ ಬಗ್ಗೆ ಉಪನ್ಯಾಸ, ವೀಡಿಯೋ ಪ್ರದರ್ಶನ ಮತ್ತು ಪ್ರತಿಜ್ಞಾ ಬೋದನೆ ದಿನವಿಡೀ ನಡೆದವು. ಎಲ್ಲಾ ವಿಭಾಗದ ಮುಖ್ಯಸ್ಥರು ಉಪಸ್ಥಿತರಿದ್ದ ರು.
ಕಾರ್ಯಕ್ರಮದಲ್ಲಿ ಬಾಯಿಯರೋಗ ಪತ್ತೆ ಮತ್ತು ಕ್ಷ-ಕಿರಣ ವಿಭಾಗ ಮುಖ್ಯಸ್ಥ ಡಾ.ಜಯಪ್ರಸಾದ ಆನೆಕಾರ ಸ್ವಾಗತಿಸಿದರು. ಡಾ.ದೀಪಿಕಾ ವಂದನಾರ್ಪಣೆಗೈದರು. ಡಾ.ಜಯಲಕ್ಷ್ಮಿ ಮತ್ತು ಡಾ.ಸೀಮಾ ಕಾರ್ಯಕ್ರಮದ ನೇತೃತ್ವ ವಹಿಸಿದ್ದರು.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…