Advertisement
ಜಿಲ್ಲೆ

ತಡವಾಗಿಯಾದರೂ ಕೊಡಗಿನಲ್ಲಿ ಭಾರೀ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ : ಜಿಲ್ಲಾಡಳಿತದಿಂದ ಮುಂಜಾಗ್ರತಾ ಕ್ರಮ

Share

ಮಡಿಕೇರಿ : ಜಿಲ್ಲೆಯಲ್ಲಿ ಜುಲೈ 20 ರಿಂದ 23 ರ ವರೆಗೆ 204 ಮಿ.ಮೀ ಗಿಂತ ಹೆಚ್ಚು (ರೆಡ್ ಅಲರ್ಟ್) ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಸಾರ್ವಜನಿಕರು ಮತ್ತು ಪ್ರವಾಸಿಗರು ಎಚ್ಚರಿಕೆಯಿಂದಿರಲು ಜಿಲ್ಲಾಡಳಿತ ಮನವಿ ಮಾಡಿದೆ.

ಪ್ರಕೃತಿ ವಿಕೋಪ ಸಂಬಂಧಿತ ಯಾವುದೇ ಸಮಸ್ಯೆಗಳಿಗೆ ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆ 08272-221077 ಹಾಗೂ ವಾಟ್ಸ್ ಆಪ್ ಸಂಖ್ಯೆ 8550001077 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.

ಎಲ್ಲಾ ಇಲಾಖೆಯ ಅಧಿಕಾರಿಗಳು ಎನ್‍ ಡಿ ಆರ್ ಡಿಫ್ ತಂಡದ ಸಹಕಾರದೊಂದಿಗೆ ಮಳೆಯ ಸಂದರ್ಭ ಸಾರ್ವಜನಿಕರ ನೆರವಿಗೆ ಧಾವಿಸಬೇಕು ಮತ್ತು ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಈಗಾಗಲೇ ಸೂಚನೆ ನೀಡಿದ್ದಾರೆ.
ಈ ಹಿಂದೆ ಜು.18 ರಿಂದಲೇ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿತ್ತಾದರೂ ಸಾಧಾರಣ ಮಳೆಯಷ್ಟೇ ಸುರಿದಿದೆ. ಗುರುವಾರ ರಾತ್ರಿ ಮಡಿಕೇರಿಗೆ ಒಂದೂವರೆ ಇಂಚಿನಷ್ಟು ಮಳೆಯಾಗಿದೆ. ಕೊಡಗು-ಕೇರಳ ಗಡಿಭಾಗದ ಕರಿಕೆ ಗ್ರಾಮದಲ್ಲಿ ಗಾಳಿ ಮಳೆಯಾಗಿದ್ದು, ಕೆಲವು ಮರಗಳು ಧರೆಗುರುಳಿ ಹಾನಿಯಾದ ಘಟನೆ ನಡೆದಿದೆ. ಆದರೆ ಜಿಲ್ಲೆಯ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗಿದ್ದು, ಶುಕ್ರವಾರ ಬೆಳಗ್ಗಿನಿಂದಲೇ ತುಂತುರು ಮಳೆಯಾಗುತ್ತಿದ್ದು, ಚಳಿಯ ವಾತಾವರಣವಿದೆ.
ಕರಾವಳಿ ಭಾಗದಲ್ಲಿ ಈಗಾಗಲೇ ಧಾರಾಕಾರ ಮಳೆಯಾಗುತ್ತಿರುವುದರಿಂದ ಕೆಲವು ಗಂಟೆ ತಡವಾಗಿಯಾದರೂ ಕೊಡಗಿಗೆ ಭಾರೀ ಮಳೆಯ ಪ್ರವೇಶವಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ.

 ಕೊಡಗು ಮಳೆ ವಿವರ :
ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 16.22 ಮಿ.ಮೀ. ಕಳೆದ ವರ್ಷ ಇದೇ ದಿನ 38.04 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 734.33 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 2274.87 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 35.85 ಮಿ.ಮೀ. ಕಳೆದ ವರ್ಷ ಇದೇ ದಿನ 71.75 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 946.70 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 3162.06 ಮಿ.ಮೀ. ಮಳೆಯಾಗಿತ್ತು.
ವಿರಾಜಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6 ಮಿ.ಮೀ. ಕಳೆದ ವರ್ಷ ಇದೇ ದಿನ 17.48 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 828.22 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1890.96 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲೂಕಿನಲ್ಲಿ ಇಂದಿನ ಸರಾಸರಿ ಮಳೆ 6.80 ಮಿ.ಮೀ. ಕಳೆದ ವರ್ಷ ಇದೇ ದಿನ 24.90 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 428.08 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 1771.58 ಮಿ.ಮೀ. ಮಳೆಯಾಗಿತ್ತು.

 

ಹಾರಂಗಿ ಜಲಾಶಯದ ನೀರಿನ ಮಟ್ಟ :
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2821.09 ಅಡಿಗಳು, ಕಳೆದ ವರ್ಷ ಇದೇ ದಿನ 2857.78 ಅಡಿ. ಹಾರಂಗಿಯಲ್ಲಿ ಬಿದ್ದ ಮಳೆ 3.20 ಮಿ.ಮೀ., ಕಳೆದ ವರ್ಷ ಇದೇ ದಿನ 12.20 ಮಿ.ಮೀ. ಇಂದಿನ ನೀರಿನ ಒಳಹರಿವು 1150 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 14465 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು ನದಿಗೆ 30 ಕ್ಯುಸೆಕ್. ನಾಲೆಗೆ 20 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನದಿಗೆ 8650, ನಾಲೆಗೆ 450 ಕ್ಯುಸೆಕ್.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೋಟದಲ್ಲಿ ಹಲವು ಬೆಳೆ – ವರ್ಷಪೂರ್ತಿ ಆದಾಯ | ಗದಗದ ರೈತ ಸಹೋದರರ ಸಮಗ್ರ ಕೃಷಿ ಮಾದರಿ

ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…

2 hours ago

ಅಡಿಕೆ ಇಳುವರಿ ಕುರಿತು “ದ ರೂರಲ್ ಮಿರರ್.ಕಾಂ” ಸಮೀಕ್ಷೆ | ಬಹುತೇಕ ತೋಟಗಳಲ್ಲಿಅಡಿಕೆ ಇಳುವರಿ ಕುಸಿತ

ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…

3 hours ago

ಅಡಿಕೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ | ಮಾರ್ಚ್‌ ತಿಂಗಳ ಇಳಿಕೆಗೆ ಹಲವು ಕಾರಣ…

ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…

12 hours ago

ಪೂರ್ವ ಮುಂಗಾರು ಸಿಡಿಲು, ಗಾಳಿ ಮಳೆಗೆ ಮುನ್ನೆಚ್ಚರಿಕೆ ವಹಿಸಿ : ವಿಜಯನಗರ ಜಿಲ್ಲಾಧಿಕಾರಿ ಸೂಚನೆ

ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…

19 hours ago

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ: ಕೇರಳದಿಂದ ಖರೀದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…

19 hours ago

ಭತ್ತದ ಗದ್ದೆಯಿಂದ ಅಡಿಕೆ ತೋಟ | ಮಣ್ಣಿನ ಆರೋಗ್ಯದ ಮೇಲೆ ಪರಿಣಾಮ ಬಿಚ್ಚಿಟ್ಟ ಸಂಶೋಧನೆ

ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್‌ ಲಭ್ಯತೆ ಕಡಿಮೆಯಾಗುತ್ತದೆ ಎಂದು…

1 day ago