ಮಾಹಿತಿ

ತಡವಾಗಿ ಬಂದ ಮುಂಗಾರು : ಇಂದಿನಿಂದ “ಮುಂಗಾರು ಮಳೆ” ಯ ವೈಭವ ಶುರುವಂತೆ…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ನಿಜವಾದ ಮಳೆಗಾಲ ಇಂದಿನಿಂದ ಶುರುವಾಗುತ್ತದೆ..!. ಹೀಗೆ ಹೇಳಿದಾಗಲೇ ಅನೇಕರು ಈ ಬಾರಿ ಸಂಶಯ ಪಡುತ್ತಾರೆ. ಈ ವರ್ಷ ಮಳೆಗಾಲದ, ಹವಾಮಾನದ ಎಲ್ಲಾ ನಿರೀಕ್ಷೆಗಳೂ ಶೇ.100 ಸರಿಯಾಗಿಲ್ಲ. ಕಾರಣ ಹವಾಮಾನದಲ್ಲಿನ ದಿಢೀರ್ ಏರುಪೇರು.

Advertisement
Advertisement

ಹವಾಮಾನದ ಬದಲಾವಣೆಯ ವೀಕ್ಷಣೆ, ಮಳೆ ಲೆಕ್ಕ, ವಾತಾವರಣ ಬದಲಾವಣೆಯ ವೀಕ್ಷಣೆ ಬಹಳ ಕುತೂಹಲವಾಗಿರುತ್ತದೆ.  ಮಳೆಗಾಲವು ನಿರೀಕ್ಷೆಯಂತೆ ಜೂ.7 ರಂದು ಕೇರಳ ತಲಪಿ ಕರಾವಳಿ ಮೂಲಕ ಜೂ.10 ಕ್ಕೆ ರಾಜ್ಯಕ್ಕೆ ಪ್ರವೇಶ ಮಾಡಬೇಕಾಗಿತ್ತು. ಆದರೆ ತೀರಾ ವಿಳಂಬವಾಗಿಯೂ ಸರಿಯಾಗಿ ಮಳೆಗಾಲ ಆರಂಭವಾಗಿಲ್ಲ. ಕಾರಣ ನೈರುತ್ಯ ಮುಂಗಾರು ಆರಂಭವಾದ ಹೊತ್ತಿನಲ್ಲೇ ವಾಯು ಚಂಡಮಾರುತ ಆರಂಭವಾಯಿತು. ಮುಂಗಾರು ಬಲಕಳೆದುಕೊಂಡಿತು.

ಇದೀಗ ಮಳೆಗಾಲ ತನ್ನ ಮೂಲಸ್ವರೂಪ ಪಡೆದುಕೊಂಡಿದೆ. ಒಂದೆರಡು ಮಳೆ ಜೋರಾಗುತ್ತದೆ. ಮಂಗಳೂರು ಕಾಸರಗೋಡು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ.
ನಾಳೆಯಿಂದ  24 ರವರೆಗೆ ಮಡಿಕೇರಿ ಹಾಗೂ ಆಗುಂಬೆ ಭಾಗಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ಇಡೀ ದ. ಕ. ಹಾಗೂ ಉಡುಪಿ ಭಾಗಗಳಲ್ಲೂ ಹೆಚ್ಚಿನ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಚಿತ್ರ ಸೂಚಿಸುತ್ತದೆ.

ಈ ಬಾರಿ ಮಳೆಯ ಮುನ್ಸೂಚನೆ ಆಗಾಗ ತಪ್ಪಾಗಿದೆ. ಇದುವರೆಗೆ ಹೀಗೆ ಆಗುತ್ತಿರಲಿಲ್ಲ. ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರ ಬಹುತೇಕ ಸರಿಯಾಗಿರುತ್ತಿತ್ತು ಎಂದು  ಹೇಳುತ್ತಾರೆ ಸಾಯಿಶೇಖರ್ ಕರಿಕಳ. ಇದೀಗ ಮಳೆಗಾಲ ಇಂದಿನಿಂದ ಶುರುವಾಗುತ್ತದೆ ಎಂದು ಉಪಗ್ರಹ ಚಿತ್ರ ಹೇಳುತ್ತದೆ ಎಂದು ಅವರು ಹೇಳುತ್ತಾರೆ.

Advertisement

 

ಇನ್ನೊಂದು ಶಾಕಿಂಗ್ ಅಂಶವೆಂದರೆ 1972 ರ ನಂತರ ಅತ್ಯಂತ ವಿಳಂಬವಾಗಿ ಮಳೆ ಬಂದ ವರ್ಷ 2019..!. ಈ ದಾಖಲೆಯನ್ನು  ಬಾಳಿಲದ ಪಿಜಿಎಸ್ ಎನ್ ಪ್ರಸಾದ್ ಹೇಳುತ್ತಾರೆ. ಅವರೇ ಹೇಳುವ ಹಾಗೆ,

 

ನನ್ನ ತಂದೆಯವರ ಡೈರಿಯಲ್ಲಿ ಕಂಡುಬಂದಂತೆ 1972 ರ ಬಳಿಕ (1972 ಜೂನ್ 20) ನಮ್ಮಲ್ಲಿ ಅತ್ಯಂತ ತಡವಾಗಿ (19/06/2019) ಮುಂಗಾರು ಮಳೆ ಆರಂಭವಾದ ವರ್ಷವಿದು. ಅಂದು ಜೂನ್ 20… ಈ ಬಾರಿ 19 ಜೂನ್…!. ಅತ್ಯಂತ ಗೊಂದಲದ ನೈರುತ್ಯ ಮುಂಗಾರು ಈ ಬಾರಿಯದು ಎಂದು ಪ್ರಸಾದ್ ಹೇಳುತ್ತಾರೆ.

Advertisement

 

ಪ್ರಸಾದ್ ಅವರ ಮಳೆ ಲೆಕ್ಕದ ಪ್ರಕಾರ

ವಾಡಿಕೆಗಿಂತ ( ಜೂನ್ 6 ) ತಡವಾಗಿ ಮಳೆಗಾಲ ಆರಂಭವಾದ ವರ್ಷಗಳು… ಹಾಗೂ ಆಯಾ ವರ್ಷ ವಾರ್ಷಿಕವಾಗಿ ಸುರಿದ ಒಟ್ಟು ಮಳೆ ಹೀಗಿದೆ

15/06/1979…. …3579 ಮಿ.ಮೀ
16/06/1983……..5119 ಮಿ.ಮೀ
11/06/1995……..4037 ಮಿ.ಮೀ
10/06/1996……..4562 ಮಿ.ಮೀ
12/06/1997……..4769 ಮಿ.ಮೀ
08/06/1998……..5443 ಮಿ.ಮೀ
10/06/2003……..4046 ಮಿ.ಮೀ
08/06/2005……..4253 ಮಿ.ಮೀ
12/06/2007……..4868 ಮಿ.ಮೀ
08/06/2012……..4314 ಮಿ.ಮೀ
09/06/2014……. 4450 ಮಿ.ಮೀ.
19/06/2019……..????

ಅತ್ಯಂತ ಗೊಂದಲದ ನೈರುತ್ಯ ಮುಂಗಾರು ಈ ಬಾರಿಯದು. ಹವಾಮಾನ ಇಲಾಖೆಯನ್ನೇ ಗೊಂದಲಕ್ಕೀಡು ಮಾಡಿದ ನೈರುತ್ಯ ಮುಂಗಾರು ಮಾರುತ ಈಗ ಸ್ವಲ್ಪ ಮಟ್ಟಿನ ವೇಗ ಪಡಕೊಂಡಂತಿದೆ. ಮುಂದಿನ ಬೆಳವಣಿಗೆ ಏನು ಗೊತ್ತಿಲ್ಲ…!

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

3 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

3 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

3 hours ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

3 hours ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

17 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

18 hours ago